<figcaption>""</figcaption>.<p><strong>ಹೆಸರಘಟ್ಟ: </strong>ಕಳೆದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದವರು ಈ ಬಾರಿ ಮತ್ತೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಾಕಿ ಉಳಿದಿದ್ದ ಕೆಲಸಗಳನ್ನು ಮುಂದೆ ಪೂರ್ಣಗೊಳಿಸುವ ಉಮೇದಿಯಲ್ಲಿದ್ದಾರೆ.</p>.<p>ಎರಡನೇಯ ಬಾರಿ ಸ್ಪರ್ಧಿಸಿರುವ ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವೇಗೌಡ, ‘ಕೋವಿಡ್ ಬಿಕ್ಕಟ್ಟು ಸೃಷ್ಟಿಯಾಗಿದ್ದರಿಂದ ಸರ್ಕಾರವು ಅನೇಕ ಯೋಜನೆಗಳ ಅನುದಾನ ನೀಡಲಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ನಾಲ್ಕಾರು ಗ್ರಾಮಗಳಿಗೆ ಒಳ ಚರಂಡಿ ಮಾಡಬೇಕಾಗಿತ್ತು. ಆ ಕೆಲಸ ಬಾಕಿ ಉಳಿದಿದೆ. ಉಳಿದಂತೆ ಗ್ರಾಮ ಪಂಚಾಯಿತಿಗೆ ಹೆಚ್ಚು ಆದಾಯ ಬರುವ ರೀತಿಯಲ್ಲಿ ಕೆಲಸ ಮಾಡಿದ ತೃಪ್ತಿ ಇದೆ’ ಎಂದರು.</p>.<p>ಮೂರು ಬಾರಿ ಗೆದ್ದು ನಾಲ್ಕನೇಯ ಬಾರಿ ಸ್ಪರ್ಧಿಸಿರುವ ಹೆಸರಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ವಸಂತಲಕ್ಷ್ಮೀ , ‘ಗ್ರಾಮದಲ್ಲಿ ಕಸವನ್ನು ವಿಲೇವಾರಿ ಮಾಡಲುಸತತ ಮೂರು ವರ್ಷಗಳಿಂದ ಸರ್ಕಾರಿ ಜಾಗಕ್ಕಾಗಿ ಹರಸಾಹಸ ಪಡಬೇಕಾಯಿತು. ಅದರೂ ಕಸವನ್ನು ಹಾಕಲು ಸರ್ಕಾರಿ ಜಾಗವಿದ್ದರೂ ಮಂಜೂರು ಆಗಲಿಲ್ಲ. ನನ್ನ ಅಧ್ಯಕ್ಷ ಅವಧಿಯಲ್ಲಿ ಇದೊಂದು ಕೆಲಸವಾಗಿದ್ದರೆ ಗ್ರಾಮಕ್ಕೆ ಒಳ್ಳೆಯದು ಮಾಡಿದ ತೃಪ್ತಿಇರುತ್ತಿತ್ತು’ ಎಂದರು.</p>.<p>ಎರಡನೇಯ ಬಾರಿ ಸ್ಪರ್ಧಿಸುತ್ತಿರುವ ಕಸಘಟ್ಟಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಎಚ್.ಎಸ್.ಮಂಜುಳ ಮಹೇಂದ್ರ, ‘ಕಸಘಟ್ಟಪುರ ಗ್ರಾಮ ಪಂಚಾಯಿತಿ ಕಚೇರಿಗೆ ನೂತನ ಕಟ್ಟಡವನ್ನು ನಿರ್ಮಿಸಲು ಸಿದ್ಧತೆ ಮಾಡಲಾಗಿದೆ. ₹1 ಕೋಟಿ ವೆಚ್ಚದಲ್ಲಿ ಪಂಚಾಯಿತಿ ಕಟ್ಟಡವನ್ನು ಕಟ್ಟಲಾಗುವುದು. ಗ್ರಾಮದ ಕಸವನ್ನು ವಿಲೇವಾರಿ ಮಾಡಲು ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಆದರೆ ಕಾರ್ಯಾಂಭ ಮಾಡಲು ಅಗಲಿಲ್ಲ. ಮುಂದಿನ ಅಧ್ಯಕ್ಷರು ಯಾರೇ ಬಂದರೂ ಸರಿ ಅವೆರಡು ಕೆಲಸವನ್ನು ಮಾಡಲು ಸಹಕಾರ ನೀಡುತ್ತೇನೆ’ ಎಂದರು.</p>.<p>‘ಶಿವಕೋಟೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷನಾಗಿದ್ದಾಗ ಪಂಚಾಯಿತಿಗೆ ಹೊಸ ಕಟ್ಟಡವನ್ನು ಕಟ್ಟಿದ್ದೇನೆ. ಸಾಕಷ್ಟು ದಾನಿಗಳ ನೆರವನ್ನು ಕೋರಿ ಕಟ್ಟಡದ ಕೆಲಸವನ್ನು ಮುಗಿಸಿದ್ದೇನೆ. ಈ ಸಾರಿ ಚುನಾವಣೆಗೆ ಸ್ಪರ್ಧಿಸಿಲ್ಲ. ಗ್ರಾಮದಲ್ಲಿ ಮತ್ತೊಬ್ಬರಿಗೆ ಅವಕಾಶ ಸಿಕ್ಕಿ ನಮಗಿಂತ ಒಳ್ಳೆಯ ಕೆಲಸಗಳನ್ನು ಮಾಡಲಿ ಎನ್ನುವ ಆಶಯ ನನ್ನದು’ ಎನ್ನುತ್ತಾರೆ ಶಿವಕೋಟೆ ಪಂಚಾಯಿತಿಯ ಅಧ್ಯಕ್ಷರಾಗಿದ್ದ ರಮೇಶ್.</p>.<p><strong>ಗ್ರಾ.ಪಂ. ಚುನಾವಣಾ ಕಣದಲ್ಲಿ ಎಂ.ಟೆಕ್.ಪದವೀಧರೆ<br />ಹೆಸರಘಟ್ಟ: </strong>ಹೋಬಳಿಯಲ್ಲಿ ಪದವೀಧರರು, ಉನ್ನತ ಶಿಕ್ಷಣ ಪಡೆದವರು ಸ್ಪರ್ಧಿಸುವ ಮೂಲಕ ಪಂಚಾಯಿತಿ ಚುನಾವಣಾ ಕಣ ರಂಗೇರಿದೆ.</p>.<div><p>ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಕೆಂಪನಹಳ್ಳಿ ಗ್ರಾಮದಲ್ಲಿ ಎಂ.ಟೆಕ್ ಪದವೀಧರೆ ವಿ.ಶ್ವೇತಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.</p></div>.<div><figcaption><strong>ವಿ.ಶ್ವೇತಾ</strong></figcaption><p>‘ಗ್ರಾಮದಲ್ಲಿರುವ ಜನರು ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಲು ನನ್ನ ಬಳಿ ಬರುತ್ತಿದ್ದರು. ಯಾವ ಅರ್ಜಿ, ಎಲ್ಲಿ ಸಿಗುತ್ತದೆ ಎಂಬ ಪ್ರಾಥಮಿಕ ಮಾಹಿತಿಯೂ ಅವರಿಗೆ ಇಲ್ಲ. ಇಂತಹ ಮುಗ್ಧ ಜನರ ಧ್ವನಿಯಾಗಿ ಇರಬೇಕು ಎನ್ನುವ ಕಾರಣಕ್ಕಾಗಿ ಸ್ಪರ್ಧಿಸಿದ್ದೇನೆ’ ಎಂದು ಅವರು ಹೇಳುತ್ತಾರೆ.</p><p>‘ಹಳ್ಳಿಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಚೆನ್ನಾಗಿ ತಿಳಿದಿರುತ್ತದೆ. ನನ್ನ ಊರು, ನನ್ನ ಜನರ ಬಗ್ಗೆ ಕಾಳಜಿ ಇರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಗ್ರಾಮದಲ್ಲಿರುವ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಬೇಕೆಂಬ ಉದ್ದೇಶ ಹೊಂದಿದ್ದೇನೆ’ ಎಂದೂ ಅವರು ಹೇಳಿದರು.</p><p>‘ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲದ ನನಗೆ ಕುಟುಂಬದ ಸದಸ್ಯರು ಮಾರ್ಗದರ್ಶನ ನೀಡುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಗ್ರಾಮದ ಏಳಿಗೆಗೆ ಶ್ರಮಿಸುವ ಗುರಿ ಹೊಂದಿದ್ದೇನೆ’ ಎಂದು ತಿಳಿಸಿದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಹೆಸರಘಟ್ಟ: </strong>ಕಳೆದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದವರು ಈ ಬಾರಿ ಮತ್ತೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಾಕಿ ಉಳಿದಿದ್ದ ಕೆಲಸಗಳನ್ನು ಮುಂದೆ ಪೂರ್ಣಗೊಳಿಸುವ ಉಮೇದಿಯಲ್ಲಿದ್ದಾರೆ.</p>.<p>ಎರಡನೇಯ ಬಾರಿ ಸ್ಪರ್ಧಿಸಿರುವ ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವೇಗೌಡ, ‘ಕೋವಿಡ್ ಬಿಕ್ಕಟ್ಟು ಸೃಷ್ಟಿಯಾಗಿದ್ದರಿಂದ ಸರ್ಕಾರವು ಅನೇಕ ಯೋಜನೆಗಳ ಅನುದಾನ ನೀಡಲಿಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ನಾಲ್ಕಾರು ಗ್ರಾಮಗಳಿಗೆ ಒಳ ಚರಂಡಿ ಮಾಡಬೇಕಾಗಿತ್ತು. ಆ ಕೆಲಸ ಬಾಕಿ ಉಳಿದಿದೆ. ಉಳಿದಂತೆ ಗ್ರಾಮ ಪಂಚಾಯಿತಿಗೆ ಹೆಚ್ಚು ಆದಾಯ ಬರುವ ರೀತಿಯಲ್ಲಿ ಕೆಲಸ ಮಾಡಿದ ತೃಪ್ತಿ ಇದೆ’ ಎಂದರು.</p>.<p>ಮೂರು ಬಾರಿ ಗೆದ್ದು ನಾಲ್ಕನೇಯ ಬಾರಿ ಸ್ಪರ್ಧಿಸಿರುವ ಹೆಸರಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ವಸಂತಲಕ್ಷ್ಮೀ , ‘ಗ್ರಾಮದಲ್ಲಿ ಕಸವನ್ನು ವಿಲೇವಾರಿ ಮಾಡಲುಸತತ ಮೂರು ವರ್ಷಗಳಿಂದ ಸರ್ಕಾರಿ ಜಾಗಕ್ಕಾಗಿ ಹರಸಾಹಸ ಪಡಬೇಕಾಯಿತು. ಅದರೂ ಕಸವನ್ನು ಹಾಕಲು ಸರ್ಕಾರಿ ಜಾಗವಿದ್ದರೂ ಮಂಜೂರು ಆಗಲಿಲ್ಲ. ನನ್ನ ಅಧ್ಯಕ್ಷ ಅವಧಿಯಲ್ಲಿ ಇದೊಂದು ಕೆಲಸವಾಗಿದ್ದರೆ ಗ್ರಾಮಕ್ಕೆ ಒಳ್ಳೆಯದು ಮಾಡಿದ ತೃಪ್ತಿಇರುತ್ತಿತ್ತು’ ಎಂದರು.</p>.<p>ಎರಡನೇಯ ಬಾರಿ ಸ್ಪರ್ಧಿಸುತ್ತಿರುವ ಕಸಘಟ್ಟಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಎಚ್.ಎಸ್.ಮಂಜುಳ ಮಹೇಂದ್ರ, ‘ಕಸಘಟ್ಟಪುರ ಗ್ರಾಮ ಪಂಚಾಯಿತಿ ಕಚೇರಿಗೆ ನೂತನ ಕಟ್ಟಡವನ್ನು ನಿರ್ಮಿಸಲು ಸಿದ್ಧತೆ ಮಾಡಲಾಗಿದೆ. ₹1 ಕೋಟಿ ವೆಚ್ಚದಲ್ಲಿ ಪಂಚಾಯಿತಿ ಕಟ್ಟಡವನ್ನು ಕಟ್ಟಲಾಗುವುದು. ಗ್ರಾಮದ ಕಸವನ್ನು ವಿಲೇವಾರಿ ಮಾಡಲು ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಆದರೆ ಕಾರ್ಯಾಂಭ ಮಾಡಲು ಅಗಲಿಲ್ಲ. ಮುಂದಿನ ಅಧ್ಯಕ್ಷರು ಯಾರೇ ಬಂದರೂ ಸರಿ ಅವೆರಡು ಕೆಲಸವನ್ನು ಮಾಡಲು ಸಹಕಾರ ನೀಡುತ್ತೇನೆ’ ಎಂದರು.</p>.<p>‘ಶಿವಕೋಟೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷನಾಗಿದ್ದಾಗ ಪಂಚಾಯಿತಿಗೆ ಹೊಸ ಕಟ್ಟಡವನ್ನು ಕಟ್ಟಿದ್ದೇನೆ. ಸಾಕಷ್ಟು ದಾನಿಗಳ ನೆರವನ್ನು ಕೋರಿ ಕಟ್ಟಡದ ಕೆಲಸವನ್ನು ಮುಗಿಸಿದ್ದೇನೆ. ಈ ಸಾರಿ ಚುನಾವಣೆಗೆ ಸ್ಪರ್ಧಿಸಿಲ್ಲ. ಗ್ರಾಮದಲ್ಲಿ ಮತ್ತೊಬ್ಬರಿಗೆ ಅವಕಾಶ ಸಿಕ್ಕಿ ನಮಗಿಂತ ಒಳ್ಳೆಯ ಕೆಲಸಗಳನ್ನು ಮಾಡಲಿ ಎನ್ನುವ ಆಶಯ ನನ್ನದು’ ಎನ್ನುತ್ತಾರೆ ಶಿವಕೋಟೆ ಪಂಚಾಯಿತಿಯ ಅಧ್ಯಕ್ಷರಾಗಿದ್ದ ರಮೇಶ್.</p>.<p><strong>ಗ್ರಾ.ಪಂ. ಚುನಾವಣಾ ಕಣದಲ್ಲಿ ಎಂ.ಟೆಕ್.ಪದವೀಧರೆ<br />ಹೆಸರಘಟ್ಟ: </strong>ಹೋಬಳಿಯಲ್ಲಿ ಪದವೀಧರರು, ಉನ್ನತ ಶಿಕ್ಷಣ ಪಡೆದವರು ಸ್ಪರ್ಧಿಸುವ ಮೂಲಕ ಪಂಚಾಯಿತಿ ಚುನಾವಣಾ ಕಣ ರಂಗೇರಿದೆ.</p>.<div><p>ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಕೆಂಪನಹಳ್ಳಿ ಗ್ರಾಮದಲ್ಲಿ ಎಂ.ಟೆಕ್ ಪದವೀಧರೆ ವಿ.ಶ್ವೇತಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.</p></div>.<div><figcaption><strong>ವಿ.ಶ್ವೇತಾ</strong></figcaption><p>‘ಗ್ರಾಮದಲ್ಲಿರುವ ಜನರು ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳಲು ನನ್ನ ಬಳಿ ಬರುತ್ತಿದ್ದರು. ಯಾವ ಅರ್ಜಿ, ಎಲ್ಲಿ ಸಿಗುತ್ತದೆ ಎಂಬ ಪ್ರಾಥಮಿಕ ಮಾಹಿತಿಯೂ ಅವರಿಗೆ ಇಲ್ಲ. ಇಂತಹ ಮುಗ್ಧ ಜನರ ಧ್ವನಿಯಾಗಿ ಇರಬೇಕು ಎನ್ನುವ ಕಾರಣಕ್ಕಾಗಿ ಸ್ಪರ್ಧಿಸಿದ್ದೇನೆ’ ಎಂದು ಅವರು ಹೇಳುತ್ತಾರೆ.</p><p>‘ಹಳ್ಳಿಗಳಲ್ಲಿರುವ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಚೆನ್ನಾಗಿ ತಿಳಿದಿರುತ್ತದೆ. ನನ್ನ ಊರು, ನನ್ನ ಜನರ ಬಗ್ಗೆ ಕಾಳಜಿ ಇರುವುದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಗ್ರಾಮದಲ್ಲಿರುವ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಬೇಕೆಂಬ ಉದ್ದೇಶ ಹೊಂದಿದ್ದೇನೆ’ ಎಂದೂ ಅವರು ಹೇಳಿದರು.</p><p>‘ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲದ ನನಗೆ ಕುಟುಂಬದ ಸದಸ್ಯರು ಮಾರ್ಗದರ್ಶನ ನೀಡುತ್ತಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಗ್ರಾಮದ ಏಳಿಗೆಗೆ ಶ್ರಮಿಸುವ ಗುರಿ ಹೊಂದಿದ್ದೇನೆ’ ಎಂದು ತಿಳಿಸಿದರು.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>