<p><strong>ಯಲಹಂಕ: </strong>ಯಲಹಂಕ ತಾಲ್ಲೂಕಿನ ಚಿಕ್ಕಜಾಲ ಗ್ರಾಮ ಪಂಚಾಯಿತಿ ಚುನಾವಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿದು, ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.</p>.<p>ಚಿಕ್ಕಜಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಕ್ಷೇತ್ರಗಳಿದ್ದು, ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರುಗಳನ್ನು ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಸೇರ್ಪಡೆ ಮಾಡಲಾಗಿದೆ ಎಂದು ಚಿಕ್ಕಜಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀಪತಿ ಹಾಗೂ ಸ್ಥಳೀಯರು ಯಲಹಂಕ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದರು.</p>.<p>ದೂರನ್ನು ಪರಿಶೀಲಿಸಿ ವಿಶೇಷ ತಹಶೀಲ್ದಾರ್, ಕಂದಾಯ ಅಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ, 152-ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ನೀಡಿದ್ದ ವರದಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು.</p>.<p>ಒಂದು ಭಾಗದ ಮತದಾರರನ್ನು ಮತ್ತೊಂದು ಭಾಗಕ್ಕೆ ವ್ಯಾಪ್ತಿ ಮೀರಿ ಸೇರ್ಪಡೆಗೊಂಡಿರುವುದು ಕಂಡುಬಂದಿದ್ದು, ಮತದಾರರ ಪಟ್ಟಿಯು ಹಲವಾರು ಲೋಪದೋಷಗಳಿಂದ ಕೂಡಿದೆ. ವ್ಯತ್ಯಾಸಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಿಸಿದಲ್ಲಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಕ್ರಮ ಸಂಖ್ಯೆಯಲ್ಲೂ ವ್ಯತ್ಯಾಸ ಉಂಟಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.</p>.<p>ಈ ವರದಿ ಅನ್ವಯ ಚುನಾವಣಾ ಆಯೋಗವು,’ ಈ ಎಲ್ಲ ಗೊಂದಲಗಳಿಂದಾಗಿ ಚುನಾವಣಾ ಪ್ರಕ್ರಿಯೆಗಳು ಉಲ್ಲಂಘನೆಯಾಗುವ ಸಾಧ್ಯತೆಗಳಿವೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸದೆ, ಚುನಾವಣೆ ನಡೆಸುವುದು ಸಮಂಜಸವಲ್ಲದ ಕಾರಣ ಚುನಾವಣೆ ಪ್ರಕ್ರಿಯೆಗಳನ್ನು ತಕ್ಷಣದಿಂದಲೇ ತಡೆಹಿಡಿಯಲಾಗಿದೆ’ ಎಂದು ಆದೇಶ ಹೊರಡಿಸಿದೆ.</p>.<p>ಮತದಾರರ ಪಟ್ಟಿಯಲ್ಲಿದ್ದ ಲೋಪದೋಷಗಳನ್ನು ಆರೋಪಿಸಿಕಾಂಗ್ರೆಸ್ ಕಾರ್ಯಕರ್ತರು ಹಾಗೂ ಚಿಕ್ಕಜಾಲ ಗ್ರಾಮಸ್ಥರು ಚಿಕ್ಕಜಾಲದ ಉಪತಹಶೀಲ್ದಾರ್ ಕಚೇರಿ ಹಾಗೂ ಯಲಹಂಕದ ತಹಶೀಲ್ದಾರ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಿದ್ದರು.</p>.<p>ಹೋರಾಟಕ್ಕೆ ಸ್ಪಂದಿಸಿ, ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಚುನಾವಣೆಯನ್ನು ತಡೆಹಿಡಿದು, ಆದೇಶ ಹೊರಡಿಸುವ ಮೂಲಕ ಜನರಿಗೆ ನ್ಯಾಯ ನೀಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಚಿಕ್ಕಜಾಲ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p><strong>ನಗರಸಭೆಗೆ ಅಗ್ರಹಿಸಿ ಗ್ರಾ ,ಪಂ.ಚುನಾವಣೆ ಬಹಿಷ್ಕಾರ</strong><br /><span style="font-size:24px;"><strong>ಹೆಸರಘಟ್ಟ: </strong>ದಾಸನಪುರ ಹೋಬಳಿಯ ಆಲೂರು ಗ್ರಾಮ ಪಂಚಾಯಿತಿಯನ್ನು ಮಾದನಾಯಕನಹಳ್ಳಿ ನಗರಸಭೆಗೆ ಸೇರ್ಪಡೆಗೊಳಿಸಬೇಕೆಂದು ಅಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ.</span><br /><span style="font-size:24px;">ಪಂಚಾಯಿತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿತ್ತು. 27 ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ 104 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಎಲ್ಲ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದು ನಗರಸಭೆಗೆ ಸೇರಿಸಬೇಕೆಂದು ಆಗ್ರಹಿಸಿದರು.</span></p>.<p><span style="font-size:24px;">ಅಲೂರು ಜಿಲ್ಲಾ ಪಂಚಾಯಿತಿ ಸದಸ್ಯ ರವಿಕುಮಾರ್ ಮಾತನಾಡಿ, ’ಆಲೂರು ಗ್ರಾಮ </span>ಪಂಚಾಯಿತಿಗೆ ನಗರಸಭೆಗೆ ಸೇರಲು ಬೇಕಾದ ಎಲ್ಲ ಅರ್ಹತೆಗಳಿವೆ. ಗ್ರಾಮಗಳು ದಿನದಿಂದ ದಿನಕ್ಕೆ ಬೆಳೆಯುತ್ತಿವೆ. ಜನಸಂಖ್ಯೆ ಹೆಚ್ಚಿದ್ದು ಜನರಿಗೆ ಪ್ರಾಥಮಿಕ ಸೌಲಭ್ಯ ನೀಡಲು ಅನುದಾನದ ಕೊರತೆಯಾಗುತ್ತಿದೆ. ನಗರಸಭೆಗೆ ಸೇರಿಸಿದರೆ ಗ್ರಾಮಗಳಿಗೆ ಹೆಚ್ಚಿನ ಅನುದಾನ ತಂದು ಜನರಿಗೆ ಅನೇಕ ಸೌಲಭ್ಯಗಳನ್ನು ನೀಡಬಹುದು‘ ಎಂದು ಹೇಳಿದರು.</p>.<p>‘ಗ್ರಾಮಸ್ಥರೆಲ್ಲರೂ ಒಗ್ಗಟ್ಟಾಗಿ ಕೂತು ಆಲೋಚನೆ ಮಾಡಿ ಚುನಾವಣೆಯ ಬಹಿಷ್ಕಾರದ ನಿರ್ಧಾರ ಮಾಡಿದ್ದೇವೆ‘ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಹೇಳಿದರು. ’ಆಲೂರು ಗ್ರಾಮ ಪಂಚಾಯಿತಿಯ ಹೆಗ್ಗಡದೇವನ ಕೋಟೆ, ಆಲೂರು, ತಮ್ಮೆನಹಳ್ಳಿ ಗ್ರಾಮಗಳಿಂದ 27 ಗ್ರಾಮ ಪಂಚಾಯಿತಿ ಸ್ಥಾನಗಳಿವೆ. ಈ ಸ್ಥಾನಗಳಿಗೆ 104 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಲ್ಕು ನಾಮಪತ್ರಗಳು ತಿರಸ್ಕಾರಗೊಂಡಿದ್ದವು. ಕುದುರೆಗೆರೆ ಗ್ರಾಮದ ವಾರ್ಡ್ ನಂ 1 ಮತ್ತು 2ರಿಂದ 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅವರು ನಾಮಪತ್ರ ಹಿಂಪಡೆದಿಲ್ಲ. ಹಾಗಾಗಿ ಕುದುರೆ ಗ್ರಾಮದಲ್ಲಿ ಚುನಾವಣೆ ನಡೆಯಲಿದೆ‘ ಎಂದು ಚುನಾವಣಾಧಿಕಾರಿ ಸಂತೋಷ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಯಲಹಂಕ ತಾಲ್ಲೂಕಿನ ಚಿಕ್ಕಜಾಲ ಗ್ರಾಮ ಪಂಚಾಯಿತಿ ಚುನಾವಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿದು, ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.</p>.<p>ಚಿಕ್ಕಜಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಕ್ಷೇತ್ರಗಳಿದ್ದು, ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರುಗಳನ್ನು ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಸೇರ್ಪಡೆ ಮಾಡಲಾಗಿದೆ ಎಂದು ಚಿಕ್ಕಜಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀಪತಿ ಹಾಗೂ ಸ್ಥಳೀಯರು ಯಲಹಂಕ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದರು.</p>.<p>ದೂರನ್ನು ಪರಿಶೀಲಿಸಿ ವಿಶೇಷ ತಹಶೀಲ್ದಾರ್, ಕಂದಾಯ ಅಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ, 152-ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ನೀಡಿದ್ದ ವರದಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು.</p>.<p>ಒಂದು ಭಾಗದ ಮತದಾರರನ್ನು ಮತ್ತೊಂದು ಭಾಗಕ್ಕೆ ವ್ಯಾಪ್ತಿ ಮೀರಿ ಸೇರ್ಪಡೆಗೊಂಡಿರುವುದು ಕಂಡುಬಂದಿದ್ದು, ಮತದಾರರ ಪಟ್ಟಿಯು ಹಲವಾರು ಲೋಪದೋಷಗಳಿಂದ ಕೂಡಿದೆ. ವ್ಯತ್ಯಾಸಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಿಸಿದಲ್ಲಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಕ್ರಮ ಸಂಖ್ಯೆಯಲ್ಲೂ ವ್ಯತ್ಯಾಸ ಉಂಟಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.</p>.<p>ಈ ವರದಿ ಅನ್ವಯ ಚುನಾವಣಾ ಆಯೋಗವು,’ ಈ ಎಲ್ಲ ಗೊಂದಲಗಳಿಂದಾಗಿ ಚುನಾವಣಾ ಪ್ರಕ್ರಿಯೆಗಳು ಉಲ್ಲಂಘನೆಯಾಗುವ ಸಾಧ್ಯತೆಗಳಿವೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸದೆ, ಚುನಾವಣೆ ನಡೆಸುವುದು ಸಮಂಜಸವಲ್ಲದ ಕಾರಣ ಚುನಾವಣೆ ಪ್ರಕ್ರಿಯೆಗಳನ್ನು ತಕ್ಷಣದಿಂದಲೇ ತಡೆಹಿಡಿಯಲಾಗಿದೆ’ ಎಂದು ಆದೇಶ ಹೊರಡಿಸಿದೆ.</p>.<p>ಮತದಾರರ ಪಟ್ಟಿಯಲ್ಲಿದ್ದ ಲೋಪದೋಷಗಳನ್ನು ಆರೋಪಿಸಿಕಾಂಗ್ರೆಸ್ ಕಾರ್ಯಕರ್ತರು ಹಾಗೂ ಚಿಕ್ಕಜಾಲ ಗ್ರಾಮಸ್ಥರು ಚಿಕ್ಕಜಾಲದ ಉಪತಹಶೀಲ್ದಾರ್ ಕಚೇರಿ ಹಾಗೂ ಯಲಹಂಕದ ತಹಶೀಲ್ದಾರ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಿದ್ದರು.</p>.<p>ಹೋರಾಟಕ್ಕೆ ಸ್ಪಂದಿಸಿ, ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಚುನಾವಣೆಯನ್ನು ತಡೆಹಿಡಿದು, ಆದೇಶ ಹೊರಡಿಸುವ ಮೂಲಕ ಜನರಿಗೆ ನ್ಯಾಯ ನೀಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಚಿಕ್ಕಜಾಲ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p><strong>ನಗರಸಭೆಗೆ ಅಗ್ರಹಿಸಿ ಗ್ರಾ ,ಪಂ.ಚುನಾವಣೆ ಬಹಿಷ್ಕಾರ</strong><br /><span style="font-size:24px;"><strong>ಹೆಸರಘಟ್ಟ: </strong>ದಾಸನಪುರ ಹೋಬಳಿಯ ಆಲೂರು ಗ್ರಾಮ ಪಂಚಾಯಿತಿಯನ್ನು ಮಾದನಾಯಕನಹಳ್ಳಿ ನಗರಸಭೆಗೆ ಸೇರ್ಪಡೆಗೊಳಿಸಬೇಕೆಂದು ಅಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ.</span><br /><span style="font-size:24px;">ಪಂಚಾಯಿತಿ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿತ್ತು. 27 ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ 104 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಎಲ್ಲ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದು ನಗರಸಭೆಗೆ ಸೇರಿಸಬೇಕೆಂದು ಆಗ್ರಹಿಸಿದರು.</span></p>.<p><span style="font-size:24px;">ಅಲೂರು ಜಿಲ್ಲಾ ಪಂಚಾಯಿತಿ ಸದಸ್ಯ ರವಿಕುಮಾರ್ ಮಾತನಾಡಿ, ’ಆಲೂರು ಗ್ರಾಮ </span>ಪಂಚಾಯಿತಿಗೆ ನಗರಸಭೆಗೆ ಸೇರಲು ಬೇಕಾದ ಎಲ್ಲ ಅರ್ಹತೆಗಳಿವೆ. ಗ್ರಾಮಗಳು ದಿನದಿಂದ ದಿನಕ್ಕೆ ಬೆಳೆಯುತ್ತಿವೆ. ಜನಸಂಖ್ಯೆ ಹೆಚ್ಚಿದ್ದು ಜನರಿಗೆ ಪ್ರಾಥಮಿಕ ಸೌಲಭ್ಯ ನೀಡಲು ಅನುದಾನದ ಕೊರತೆಯಾಗುತ್ತಿದೆ. ನಗರಸಭೆಗೆ ಸೇರಿಸಿದರೆ ಗ್ರಾಮಗಳಿಗೆ ಹೆಚ್ಚಿನ ಅನುದಾನ ತಂದು ಜನರಿಗೆ ಅನೇಕ ಸೌಲಭ್ಯಗಳನ್ನು ನೀಡಬಹುದು‘ ಎಂದು ಹೇಳಿದರು.</p>.<p>‘ಗ್ರಾಮಸ್ಥರೆಲ್ಲರೂ ಒಗ್ಗಟ್ಟಾಗಿ ಕೂತು ಆಲೋಚನೆ ಮಾಡಿ ಚುನಾವಣೆಯ ಬಹಿಷ್ಕಾರದ ನಿರ್ಧಾರ ಮಾಡಿದ್ದೇವೆ‘ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಹೇಳಿದರು. ’ಆಲೂರು ಗ್ರಾಮ ಪಂಚಾಯಿತಿಯ ಹೆಗ್ಗಡದೇವನ ಕೋಟೆ, ಆಲೂರು, ತಮ್ಮೆನಹಳ್ಳಿ ಗ್ರಾಮಗಳಿಂದ 27 ಗ್ರಾಮ ಪಂಚಾಯಿತಿ ಸ್ಥಾನಗಳಿವೆ. ಈ ಸ್ಥಾನಗಳಿಗೆ 104 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಲ್ಕು ನಾಮಪತ್ರಗಳು ತಿರಸ್ಕಾರಗೊಂಡಿದ್ದವು. ಕುದುರೆಗೆರೆ ಗ್ರಾಮದ ವಾರ್ಡ್ ನಂ 1 ಮತ್ತು 2ರಿಂದ 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅವರು ನಾಮಪತ್ರ ಹಿಂಪಡೆದಿಲ್ಲ. ಹಾಗಾಗಿ ಕುದುರೆ ಗ್ರಾಮದಲ್ಲಿ ಚುನಾವಣೆ ನಡೆಯಲಿದೆ‘ ಎಂದು ಚುನಾವಣಾಧಿಕಾರಿ ಸಂತೋಷ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>