ಮಹದೇವಪುರ, ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಯಶವಂತಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಬ್ಯಾಟರಾಯನಪುರ, ಯಲಹಂಕ, ಸರ್ವಜ್ಞನಗರ, ಕೆ.ಆರ್.ಪುರ ಕ್ಷೇತ್ರಗಳ ವ್ಯಾಪ್ತಿಯಲ್ಲಿ 110 ಹಳ್ಳಿಗಳು ಬರುತ್ತವೆ. ಆದರೆ, ನವ ನಗರೋತ್ಥಾನ ಯೋಜನೆಯಲ್ಲಿ ಯಲಹಂಕ, ಕೆ.ಆರ್.ಪುರ, ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಮಹದೇವಪುರ ಹಾಗೂ ಯಶವಂತಪುರ ಕ್ಷೇತ್ರಗಳಿಗೆ ಅನುದಾನ ಹಂಚಲಾಗಿದೆ. ಈ ಅನುದಾನಗಳು ಮೂವರು ಅನರ್ಹ ಶಾಸಕರು ಹಾಗೂ ಮೂವರು ಬಿಜೆಪಿ ಶಾಸಕರ ಕ್ಷೇತ್ರಗಳ ಪಾಲಾಗಿವೆ. ಅನರ್ಹ ಕ್ಷೇತ್ರಗಳಿಗೇ ₹296 ಕೋಟಿ ಕೊಡಲಾಗಿದೆ.