<p><strong>ಬೆಂಗಳೂರು</strong>: ‘ಹಂಪಿ ಕನ್ನಡ ವಿಶ್ವವಿದ್ಯಾಲಯವು ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಚ್.ಅಶ್ವತ್ಥನಾರಾಯಣ ಭರವಸೆ ನೀಡಿದರು. </p>.<p>ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದ ನಿಯೋಗವು ಸಚಿವರನ್ನು ಶನಿವಾರ ಭೇಟಿ ಮಾಡಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತು.</p>.<p>ನಿಯೋಗದಲ್ಲಿದ್ದ ಪ್ರಮುಖರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್ ಕಾರಣದಿಂದಅನುದಾನ ಬಿಡುಗಡೆ ವಿಳಂಬವಾಗಿದೆ. ಪ್ರಸಾರಾಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ವಿಶ್ವವಿದ್ಯಾಲಯಕ್ಕೆ ವರಮಾನ ಇಲ್ಲದಂತಾಗಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡಲಿದ್ದೇವೆ’ ಎಂದರು.</p>.<p>ಕನ್ನಡ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಒತ್ತಾಯಿಸಿ ಕರವೇ ಶುಕ್ರವಾರ ಹಮ್ಮಿಕೊಂಡಿದ್ದ ಟ್ವಿಟರ್ ಅಭಿಯಾನದ ಕುರಿತು ಉಲ್ಲೇಖಿಸಿದ ಸಚಿವರು, ‘ಕನ್ನಡಿಗರ ಅಹವಾಲುಗಳನ್ನು ಗಮನಿಸಿದ್ದೇನೆ. ಕನ್ನಡ ನಾಡು, ನುಡಿ ಹಿತಾಸಕ್ತಿ ರಕ್ಷಣೆಗೆಸರ್ಕಾರ ಬದ್ಧ’ ಎಂದರು.</p>.<p>‘ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ₹ 6 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಿಬ್ಬಂದಿಯ ಬಾಕಿ ವೇತನಗಳನ್ನು ಪಾವತಿಸಬೇಕು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಬೇಕು, ಸ್ಥಗಿತಗೊಂಡಿರುವ ಎಲ್ಲ ಕೋರ್ಸ್ಗಳ ಪುನರಾರಂಭಕ್ಕೆ ಕ್ರಮಕೈಗೊಳ್ಳಬೇಕು. ಪ್ರವೇಶಾತಿ ಪ್ರಾರಂಭಿಸಬೇಕು’ ಎಂದು ನಿಯೋಗವು ಸಚಿವರಲ್ಲಿ ಒತ್ತಾಯಿಸಿತು.</p>.<p>‘ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಬೇಕು, ದೂರಶಿಕ್ಷಣ ಕೋರ್ಸ್ಗಳನ್ನು ಪುನರಾರಂಭಿಸಬೇಕು. ವಿಶ್ವವಿದ್ಯಾಲಯದ ಆಡಳಿತ ಯಂತ್ರ ಚುರುಕುಗೊಳಿಸಬೇಕು’ ಎಂದೂ ಮನವಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಂಪಿ ಕನ್ನಡ ವಿಶ್ವವಿದ್ಯಾಲಯವು ಎದುರಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಚ್.ಅಶ್ವತ್ಥನಾರಾಯಣ ಭರವಸೆ ನೀಡಿದರು. </p>.<p>ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದ ನಿಯೋಗವು ಸಚಿವರನ್ನು ಶನಿವಾರ ಭೇಟಿ ಮಾಡಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತು.</p>.<p>ನಿಯೋಗದಲ್ಲಿದ್ದ ಪ್ರಮುಖರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್ ಕಾರಣದಿಂದಅನುದಾನ ಬಿಡುಗಡೆ ವಿಳಂಬವಾಗಿದೆ. ಪ್ರಸಾರಾಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ವಿಶ್ವವಿದ್ಯಾಲಯಕ್ಕೆ ವರಮಾನ ಇಲ್ಲದಂತಾಗಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡಲಿದ್ದೇವೆ’ ಎಂದರು.</p>.<p>ಕನ್ನಡ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಒತ್ತಾಯಿಸಿ ಕರವೇ ಶುಕ್ರವಾರ ಹಮ್ಮಿಕೊಂಡಿದ್ದ ಟ್ವಿಟರ್ ಅಭಿಯಾನದ ಕುರಿತು ಉಲ್ಲೇಖಿಸಿದ ಸಚಿವರು, ‘ಕನ್ನಡಿಗರ ಅಹವಾಲುಗಳನ್ನು ಗಮನಿಸಿದ್ದೇನೆ. ಕನ್ನಡ ನಾಡು, ನುಡಿ ಹಿತಾಸಕ್ತಿ ರಕ್ಷಣೆಗೆಸರ್ಕಾರ ಬದ್ಧ’ ಎಂದರು.</p>.<p>‘ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ₹ 6 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಿಬ್ಬಂದಿಯ ಬಾಕಿ ವೇತನಗಳನ್ನು ಪಾವತಿಸಬೇಕು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಬೇಕು, ಸ್ಥಗಿತಗೊಂಡಿರುವ ಎಲ್ಲ ಕೋರ್ಸ್ಗಳ ಪುನರಾರಂಭಕ್ಕೆ ಕ್ರಮಕೈಗೊಳ್ಳಬೇಕು. ಪ್ರವೇಶಾತಿ ಪ್ರಾರಂಭಿಸಬೇಕು’ ಎಂದು ನಿಯೋಗವು ಸಚಿವರಲ್ಲಿ ಒತ್ತಾಯಿಸಿತು.</p>.<p>‘ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಬೇಕು, ದೂರಶಿಕ್ಷಣ ಕೋರ್ಸ್ಗಳನ್ನು ಪುನರಾರಂಭಿಸಬೇಕು. ವಿಶ್ವವಿದ್ಯಾಲಯದ ಆಡಳಿತ ಯಂತ್ರ ಚುರುಕುಗೊಳಿಸಬೇಕು’ ಎಂದೂ ಮನವಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>