‘ಗಂಗಾಂಬಿಕೆ ಅವರು ಮೇಯರ್ ಆಗಿದ್ದಾಗ ಮಠಕ್ಕೆ ಭೇಟಿ ನೀಡಿದ್ದರು. ಸಂಸ್ಥೆಯ ಉಚಿತ ವಸತಿ ಶಾಲೆ, ಆಸ್ಪತ್ರೆ ಮತ್ತು ಉಚಿತ ಡಯಾಲಿಸಿಸ್ ಕೇಂದ್ರ ಹಾಗೂ ವೃದ್ಧಾಶ್ರಮಗಳನ್ನು ನೋಡಿ ಸಂತೋಷ ವ್ಯಕ್ತಪಡಿಸಿದ್ದರು. ಸಂಘ ಸಂಸ್ಥೆಗಳ ಅನುದಾನದಡಿಯಲ್ಲಿ ₹75 ಲಕ್ಷ ಮಂಜೂರು ಮಾಡಿದ್ದರು. ಆದರೆ, ಈಗ ಅದನ್ನು ₹4 ಲಕ್ಷಕ್ಕೆ ಇಳಿಸಲಾಗಿದೆ. ಇದರಿಂದ ನಮಗೆ ಮತ್ತು ಸಂಸ್ಥೆಯ ಸಾವಿರಾರು ಅಭಿಮಾನಿಗಳಿಗೆ ನೋವಾಗಿದೆ. ಈ ಮೂಲಕ ಸಮಾಜ ಸೇವಾ ಕಾರ್ಯಗಳಿಗೆ ಅವಮಾನಿಸಲಾಗಿದೆ’ ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.