<p><strong>ಬೆಂಗಳೂರು:</strong> ಬಿಜೆಪಿ ನೇತೃತ್ವದ ಬಿಬಿಎಂಪಿ ಆಡಳಿತವು ಸಂಘ ಸಂಸ್ಥೆಗಳಿಗೆ ನೀಡಿದ್ದ ಅನುದಾನ ಕಡಿತ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ವಿಭೂತಿಪುರ ಮಠಕ್ಕೆ ನೀಡಿದ್ದ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಗಂಗಾಂಬಿಕೆ ಅವರು ಮೇಯರ್ ಆಗಿದ್ದಾಗ ಮಠಕ್ಕೆ ಭೇಟಿ ನೀಡಿದ್ದರು. ಸಂಸ್ಥೆಯ ಉಚಿತ ವಸತಿ ಶಾಲೆ, ಆಸ್ಪತ್ರೆ ಮತ್ತು ಉಚಿತ ಡಯಾಲಿಸಿಸ್ ಕೇಂದ್ರ ಹಾಗೂ ವೃದ್ಧಾಶ್ರಮಗಳನ್ನು ನೋಡಿ ಸಂತೋಷ ವ್ಯಕ್ತಪಡಿಸಿದ್ದರು. ಸಂಘ ಸಂಸ್ಥೆಗಳ ಅನುದಾನದಡಿಯಲ್ಲಿ ₹75 ಲಕ್ಷ ಮಂಜೂರು ಮಾಡಿದ್ದರು. ಆದರೆ, ಈಗ ಅದನ್ನು ₹4 ಲಕ್ಷಕ್ಕೆ ಇಳಿಸಲಾಗಿದೆ. ಇದರಿಂದ ನಮಗೆ ಮತ್ತು ಸಂಸ್ಥೆಯ ಸಾವಿರಾರು ಅಭಿಮಾನಿಗಳಿಗೆ ನೋವಾಗಿದೆ. ಈ ಮೂಲಕ ಸಮಾಜ ಸೇವಾ ಕಾರ್ಯಗಳಿಗೆ ಅವಮಾನಿಸಲಾಗಿದೆ’ ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಬಿಜೆಪಿ ಆಡಳಿತವು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳದೆ ಕೋಟಿ ಕೋಟಿ ಹಣವನ್ನು ಮನಸ್ಸಿಗೆ ಬಂದಂತೆ ಸಂಸ್ಥೆಗಳಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿ ಅನ್ಯಾಯ ಸರಿಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ನೇತೃತ್ವದ ಬಿಬಿಎಂಪಿ ಆಡಳಿತವು ಸಂಘ ಸಂಸ್ಥೆಗಳಿಗೆ ನೀಡಿದ್ದ ಅನುದಾನ ಕಡಿತ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ವಿಭೂತಿಪುರ ಮಠಕ್ಕೆ ನೀಡಿದ್ದ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಗಂಗಾಂಬಿಕೆ ಅವರು ಮೇಯರ್ ಆಗಿದ್ದಾಗ ಮಠಕ್ಕೆ ಭೇಟಿ ನೀಡಿದ್ದರು. ಸಂಸ್ಥೆಯ ಉಚಿತ ವಸತಿ ಶಾಲೆ, ಆಸ್ಪತ್ರೆ ಮತ್ತು ಉಚಿತ ಡಯಾಲಿಸಿಸ್ ಕೇಂದ್ರ ಹಾಗೂ ವೃದ್ಧಾಶ್ರಮಗಳನ್ನು ನೋಡಿ ಸಂತೋಷ ವ್ಯಕ್ತಪಡಿಸಿದ್ದರು. ಸಂಘ ಸಂಸ್ಥೆಗಳ ಅನುದಾನದಡಿಯಲ್ಲಿ ₹75 ಲಕ್ಷ ಮಂಜೂರು ಮಾಡಿದ್ದರು. ಆದರೆ, ಈಗ ಅದನ್ನು ₹4 ಲಕ್ಷಕ್ಕೆ ಇಳಿಸಲಾಗಿದೆ. ಇದರಿಂದ ನಮಗೆ ಮತ್ತು ಸಂಸ್ಥೆಯ ಸಾವಿರಾರು ಅಭಿಮಾನಿಗಳಿಗೆ ನೋವಾಗಿದೆ. ಈ ಮೂಲಕ ಸಮಾಜ ಸೇವಾ ಕಾರ್ಯಗಳಿಗೆ ಅವಮಾನಿಸಲಾಗಿದೆ’ ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಬಿಜೆಪಿ ಆಡಳಿತವು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳದೆ ಕೋಟಿ ಕೋಟಿ ಹಣವನ್ನು ಮನಸ್ಸಿಗೆ ಬಂದಂತೆ ಸಂಸ್ಥೆಗಳಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿ ಅನ್ಯಾಯ ಸರಿಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>