‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಸಮುದಾಯದ ವಕೀಲರಿಗೆ ಈಗ ನೀಡಲಾಗುತ್ತಿರುವ ಸ್ಟೈಪಂಡ್ ಅನ್ನು ಎಲ್ಲಾ ವರ್ಗಗಳ ಆರ್ಥಿಕವಾಗಿ ಹಿಂದುಳಿದವರಿಗೂ ವಿಸ್ತರಿಸಬೇಕು. ಯುವ ವಕೀಲರಿಗೆ ವೃತ್ತಿ ತರಬೇತಿ ನೀಡುವ ದಿಸೆಯಲ್ಲಿ ಮಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರ್ಗಿಗಳಲ್ಲಿ ಅಕಾಡೆಮಿಗಳನ್ನು ಸ್ಥಾಪಿಸುವ ಯೋಜನೆ ನನೆಗುದಿಗೆ ಬಿದ್ದಿದೆ. ಆದ್ದರಿಂದ ಈ ವರ್ಷ ಒಂದಾದರೂ ಅಕಾಡೆಮಿ ಕೇಂದ್ರ ಸ್ಥಾಪಿಸಬೇಕು. ತಾಲ್ಲೂಕು ಕೇಂದ್ರದಲ್ಲಿ ಇ–ಲೈಬ್ರರಿ ಸ್ಥಾಪಿಸಲು ಕೋರಲಾಗಿದೆ’ ಎಂದರು.