<p><strong>ಬೆಂಗಳೂರು</strong>: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಆಯುಕ್ತರು, ಸ್ಥಾಯಿ ಸಮಿತಿ, ಪಾಲಿಕೆ ಸಭೆಗೆ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರು, ಟೆಂಡರ್ ಅನುಮೋದನೆಯ ಪ್ರಮಾಣ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.</p>.<p>ನಗರ ಪಾಲಿಕೆಯ ಆಯುಕ್ತರು ₹3 ಕೋಟಿವರೆಗಿನ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ, ಕಾಮಗಾರಿಗಳ ಟೆಂಡರ್ ಅನುಮೋದನೆ ನೀಡಬಹುದು. ಸ್ಥಾಯಿ ಸಮಿತಿ ಅಥವಾ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ₹3 ಕೋಟಿಯಿಂದ ₹5 ಕೋಟಿ, ಪಾಲಿಕೆ ಸಭೆಗೆ ₹5 ಕೋಟಿಯಿಂದ ₹10 ಕೋಟಿವರೆಗಿನ ಕಾಮಗಾರಿಗಳಿಗೆ ಅನುಮೋದನೆ ನೀಡಲು ಅಧಿಕಾರ ನೀಡಲಾಗಿದೆ.</p>.<p>ಯಾವುದೇ ಕಾಮಗಾರಿಯ ಮೊತ್ತ ₹10 ಕೋಟಿ ಮೀರಿದರೆ ಅದರ ಅಂದಾಜುಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ, ಟೆಂಡರ್ ಅನುಮೋದನೆಯನ್ನು ಸರ್ಕಾರದಿಂದಲೇ ಪಡೆಯಬೇಕು ಎಂದು ಆದೇಶಿಸಲಾಗಿದೆ.</p>.<p><strong>ಯೋಜನೆ ಅನುಷ್ಠಾನ ಘಟಕ:</strong> ಬಿಬಿಎಂಪಿಯಲ್ಲಿದ್ದ ಬೃಹತ್ ನೀರುಗಾಲುವೆ ವಿಭಾಗದ ಯೋಜನೆಗಳನ್ನು ಜಿಬಿಎಯಲ್ಲಿರುವ ಯೋಜನಾ ಅನುಷ್ಠಾನ ಘಟಕದ ಮುಖ್ಯ ಎಂಜಿನಿಯರ್ ಅವರಿಗೆ ವರ್ಗಾಯಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.</p>.<p>₹238.72 ಕೋಟಿ ಮೊತ್ತದ ನಗರ ಪ್ರವಾಹ ಅಪಾಯ ನಿರ್ವಹಣೆ (ಎನ್ಡಿಎಂಎಫ್) ಕಾರ್ಯಕ್ರಮ ಯೋಜನೆ, ವಿಶ್ವ ಬ್ಯಾಂಕ್ ನೆರವಿನ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮ ₹2,000 ಕೋಟಿ ಮೊತ್ತದ ಕಾಮಗಾರಿಗಳ ಕ್ರಿಯಾಯೋಜನೆ ವರ್ಗಾಯಿಸಲಾಗಿದೆ.</p>.<p>ಯೋಜನೆ ಅನುಷ್ಠಾನ ಘಟಕಕ್ಕೆ ಎಸ್.ವಿ. ರಾಜೇಶ್ ಅವರನ್ನು ಮುಖ್ಯ ಎಂಜಿನಿಯರ್ ಆಗಿ ಸ್ಥಳ ನಿಯುಕ್ತಿಗೊಳಿಸಿದ್ದು, ಎರಡೂ ಯೋಜನೆಗಳನ್ನು ಅವರಿಗೆ ವಹಿಸಲಾಗಿದೆ. ಜಿಬಿಎಯಲ್ಲಿರುವ 10 ಕಾರ್ಯಪಾಲಕ ಎಂಜಿನಿಯರ್ಗಳಲ್ಲಿ ಅಗತ್ಯವಿರುವಷ್ಟು ಇಇಗಳನ್ನು ಈ ವಿಭಾಗಕ್ಕೆ ನೇಮಿಸಿಕೊಂಡು ಕಾಮಗಾರಿ ಕಾರ್ಯಾದೇಶ ನೀಡಿ ಅನುಷ್ಠಾನಗೊಳಿಸಬೇಕು ಎಂದು ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಆಯುಕ್ತರು, ಸ್ಥಾಯಿ ಸಮಿತಿ, ಪಾಲಿಕೆ ಸಭೆಗೆ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರು, ಟೆಂಡರ್ ಅನುಮೋದನೆಯ ಪ್ರಮಾಣ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.</p>.<p>ನಗರ ಪಾಲಿಕೆಯ ಆಯುಕ್ತರು ₹3 ಕೋಟಿವರೆಗಿನ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ, ಕಾಮಗಾರಿಗಳ ಟೆಂಡರ್ ಅನುಮೋದನೆ ನೀಡಬಹುದು. ಸ್ಥಾಯಿ ಸಮಿತಿ ಅಥವಾ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಗೆ ₹3 ಕೋಟಿಯಿಂದ ₹5 ಕೋಟಿ, ಪಾಲಿಕೆ ಸಭೆಗೆ ₹5 ಕೋಟಿಯಿಂದ ₹10 ಕೋಟಿವರೆಗಿನ ಕಾಮಗಾರಿಗಳಿಗೆ ಅನುಮೋದನೆ ನೀಡಲು ಅಧಿಕಾರ ನೀಡಲಾಗಿದೆ.</p>.<p>ಯಾವುದೇ ಕಾಮಗಾರಿಯ ಮೊತ್ತ ₹10 ಕೋಟಿ ಮೀರಿದರೆ ಅದರ ಅಂದಾಜುಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ, ಟೆಂಡರ್ ಅನುಮೋದನೆಯನ್ನು ಸರ್ಕಾರದಿಂದಲೇ ಪಡೆಯಬೇಕು ಎಂದು ಆದೇಶಿಸಲಾಗಿದೆ.</p>.<p><strong>ಯೋಜನೆ ಅನುಷ್ಠಾನ ಘಟಕ:</strong> ಬಿಬಿಎಂಪಿಯಲ್ಲಿದ್ದ ಬೃಹತ್ ನೀರುಗಾಲುವೆ ವಿಭಾಗದ ಯೋಜನೆಗಳನ್ನು ಜಿಬಿಎಯಲ್ಲಿರುವ ಯೋಜನಾ ಅನುಷ್ಠಾನ ಘಟಕದ ಮುಖ್ಯ ಎಂಜಿನಿಯರ್ ಅವರಿಗೆ ವರ್ಗಾಯಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.</p>.<p>₹238.72 ಕೋಟಿ ಮೊತ್ತದ ನಗರ ಪ್ರವಾಹ ಅಪಾಯ ನಿರ್ವಹಣೆ (ಎನ್ಡಿಎಂಎಫ್) ಕಾರ್ಯಕ್ರಮ ಯೋಜನೆ, ವಿಶ್ವ ಬ್ಯಾಂಕ್ ನೆರವಿನ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮ ₹2,000 ಕೋಟಿ ಮೊತ್ತದ ಕಾಮಗಾರಿಗಳ ಕ್ರಿಯಾಯೋಜನೆ ವರ್ಗಾಯಿಸಲಾಗಿದೆ.</p>.<p>ಯೋಜನೆ ಅನುಷ್ಠಾನ ಘಟಕಕ್ಕೆ ಎಸ್.ವಿ. ರಾಜೇಶ್ ಅವರನ್ನು ಮುಖ್ಯ ಎಂಜಿನಿಯರ್ ಆಗಿ ಸ್ಥಳ ನಿಯುಕ್ತಿಗೊಳಿಸಿದ್ದು, ಎರಡೂ ಯೋಜನೆಗಳನ್ನು ಅವರಿಗೆ ವಹಿಸಲಾಗಿದೆ. ಜಿಬಿಎಯಲ್ಲಿರುವ 10 ಕಾರ್ಯಪಾಲಕ ಎಂಜಿನಿಯರ್ಗಳಲ್ಲಿ ಅಗತ್ಯವಿರುವಷ್ಟು ಇಇಗಳನ್ನು ಈ ವಿಭಾಗಕ್ಕೆ ನೇಮಿಸಿಕೊಂಡು ಕಾಮಗಾರಿ ಕಾರ್ಯಾದೇಶ ನೀಡಿ ಅನುಷ್ಠಾನಗೊಳಿಸಬೇಕು ಎಂದು ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>