<p><strong>ನವದೆಹಲಿ</strong>: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗಳನ್ನು ಮುಗಿಸಲು ಸೆಪ್ಟೆಂಬರ್ 30ರ ವರೆಗೆ ಸಮಯಾವಕಾಶ ನೀಡಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ ಅನ್ನು ಸೋಮವಾರ ಕೋರಿವೆ. </p>.<p>ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್), ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಂಡಳಿ ಪರೀಕ್ಷೆಗಳು ಇತ್ಯಾದಿಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಜೂನ್ 30ರಿಂದ ಅನ್ಚಯ ವಾಗುವಂತೆ ಹೆಚ್ಚುವರಿ ಮೂರು ತಿಂಗಳ ಸಮಯ ನೀಡಬೇಕು ಎಂದು ಮನವಿ ಮಾಡಿವೆ. ಜೂನ್ 30ರೊಳಗೆ ಚುನಾವಣೆಗಳನ್ನುಪೂರ್ಣಗೊಳಿಸಲು ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್ನ ಜನವರಿ 12ರ ಆದೇಶವನ್ನು ಮಾರ್ಪಡಿಸುವಂತೆ ಕೋರಿವೆ.</p>.<p>ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗಳನ್ನು ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ತನ್ನ ಅರ್ಜಿಯಲ್ಲಿ ತಿಳಿಸಿದೆ.</p>.<p>‘ಆದಾಗ್ಯೂ, ಕೇಂದ್ರ ಸರ್ಕಾರವು ಜನಗಣತಿಗೆ ಆದೇಶಿಸಿರುವುದರಿಂದರಾಜ್ಯ ಸರ್ಕಾರಿ ಅಧಿಕಾರಿಗಳು <br>ವ್ಯಕ್ತಪಡಿಸಿದ ಕಳವಳಗಳು ಮೇಲ್ನೋಟಕ್ಕೆ ನಿಜವೆಂದು ತೋರುತ್ತದೆ. ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸಹಾಯ ಮಾಡುವ ಜವಾಬ್ದಾರಿಗಳನ್ನುಹೊಂದಿರುವ ಅಧಿಕಾರಿ ಗಳ ಸಂಪೂರ್ಣ<br>ಸಮಯ ಮತ್ತು ಲಾಜಿಸ್ಟಿಕ್ಸ್ಅನ್ನು ಎಸ್ಐಆರ್ ಆಕ್ರಮಿಸಿ ಕೊಂಡಿದೆ. ಆದ್ದರಿಂದ, ಚುನಾವಣೆ<br>ಗಳನ್ನು ನಡೆಸುವಲ್ಲಿ ಕೋರಿದ ಸಮಯ ವಿಸ್ತರಣೆಯು ವಿಶ್ವಾಸಾರ್ಹವಾಗಿದೆ’ ಎಂದು ಆಯೋಗ ಹೇಳಿದೆ.</p>.<p>‘ರಾಜ್ಯ ಸರ್ಕಾರದ ಸಹಾಯದಿಂದ ಆಯೋಗವು ಚುನಾವಣೆಗಳನ್ನು ನಡೆಸುತ್ತದೆ. ಆದರೆ, ಜನಗಣತಿ, ಎಸ್ಐಆರ್ ಇತ್ಯಾದಿ ನಡೆಸಲು ರಾಜ್ಯ ಸರ್ಕಾರವು ಮಾನವ ಸಂಪನ್ಮೂಲ ವನ್ನು ನಿಯೋಜಿಸಿದೆ. ಹೀಗಾಗಿ, ಅಗತ್ಯವಿರುವ ಮಾನವ ಸಂಪನ್ಮೂಲ ಮತ್ತು ಲಾಜಿಸ್ಟಿಕ್ಸ್ ರಾಜ್ಯ ಸರ್ಕಾರದಲ್ಲಿ ಲಭ್ಯವಿಲ್ಲದಿರಬಹುದು’ ಎಂದು ಆಯೋಗ ಅಭಿಪ್ರಾಯಪಟ್ಟಿದೆ. </p>.<p>ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಯಾವುದೇ ನಿಧಿ ಅಥವಾ ಸಿಬ್ಬಂದಿ ಇಲ್ಲ ಎಂದು ಆಯೋಗ ಈ ಹಿಂದೆ ಹೇಳಿತ್ತು.</p>.<p><strong>ನಿಲುವು ಬದಲಿಸಿದ ಆಯೋಗ</strong></p><p>‘ಐದು ನಗರ ಪಾಲಿಕೆಗಳಿಗೆ ಜೂನ್ 14ರಿಂದ 24ರ ಅವಧಿಯಲ್ಲಿ ಚುನಾವಣೆ ನಡೆಸಲಾಗುವುದು. ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಿ.ಎಸ್. ಸಂಗ್ರೇಶಿ ಕಳೆದ ಶುಕ್ರವಾರ ಹೇಳಿಕೆ ನೀಡಿದ್ದರು. ಮೂರೇ ದಿನಗಳಲ್ಲಿ ಆಯೋಗ ಮತ್ತೊಮ್ಮೆ ನಿಲುವು ಬದಲಿಸಿದೆ. </p>.<p><strong>ಹಣಕಾಸಿನ ಕೊರತೆ ಇಲ್ಲ</strong></p><p>ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆಗಳನ್ನು ನಡೆಸಲು ಹಣದ ಕೊರತೆಯಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರವು 2026-27ನೇ ಸಾಲಿಗೆ ‘ರಾಜ್ಯಗಳಲ್ಲಿನ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ₹150 ಕೋಟಿ ಹಂಚಿಕೆ ಮಾಡಿದೆ ಮತ್ತು ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆಗಳ ಸಿದ್ಧತೆಗಳನ್ನು ಮಾಡಲು ಮೊದಲ ಕಂತಾಗಿ ₹37.50 ಕೋಟಿ ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು 2026-27ರ ಹಣಕಾಸು ವರ್ಷಕ್ಕೆ ತನ್ನ ಬಜೆಟ್ನಲ್ಲಿ ಚುನಾವಣಾ ಅನುದಾನವಾಗಿ ₹100 ಕೋಟಿ ಹಂಚಿಕೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ. ಇದಲ್ಲದೆ ಈ ಚುನಾವಣೆಗಳಿಗೆ ಪ್ರತ್ಯೇಕವಾಗಿ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಾಧಿಕಾರವು ಈಗಾಗಲೇ ₹25 ಕೋಟಿ ಬಿಡುಗಡೆ ಮಾಡಿದೆ ಎಂದೂ ಸರ್ಕಾರ ಮಾಹಿತಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗಳನ್ನು ಮುಗಿಸಲು ಸೆಪ್ಟೆಂಬರ್ 30ರ ವರೆಗೆ ಸಮಯಾವಕಾಶ ನೀಡಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ ಅನ್ನು ಸೋಮವಾರ ಕೋರಿವೆ. </p>.<p>ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್), ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಂಡಳಿ ಪರೀಕ್ಷೆಗಳು ಇತ್ಯಾದಿಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ, ಜೂನ್ 30ರಿಂದ ಅನ್ಚಯ ವಾಗುವಂತೆ ಹೆಚ್ಚುವರಿ ಮೂರು ತಿಂಗಳ ಸಮಯ ನೀಡಬೇಕು ಎಂದು ಮನವಿ ಮಾಡಿವೆ. ಜೂನ್ 30ರೊಳಗೆ ಚುನಾವಣೆಗಳನ್ನುಪೂರ್ಣಗೊಳಿಸಲು ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್ನ ಜನವರಿ 12ರ ಆದೇಶವನ್ನು ಮಾರ್ಪಡಿಸುವಂತೆ ಕೋರಿವೆ.</p>.<p>ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗಳನ್ನು ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ತನ್ನ ಅರ್ಜಿಯಲ್ಲಿ ತಿಳಿಸಿದೆ.</p>.<p>‘ಆದಾಗ್ಯೂ, ಕೇಂದ್ರ ಸರ್ಕಾರವು ಜನಗಣತಿಗೆ ಆದೇಶಿಸಿರುವುದರಿಂದರಾಜ್ಯ ಸರ್ಕಾರಿ ಅಧಿಕಾರಿಗಳು <br>ವ್ಯಕ್ತಪಡಿಸಿದ ಕಳವಳಗಳು ಮೇಲ್ನೋಟಕ್ಕೆ ನಿಜವೆಂದು ತೋರುತ್ತದೆ. ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸಹಾಯ ಮಾಡುವ ಜವಾಬ್ದಾರಿಗಳನ್ನುಹೊಂದಿರುವ ಅಧಿಕಾರಿ ಗಳ ಸಂಪೂರ್ಣ<br>ಸಮಯ ಮತ್ತು ಲಾಜಿಸ್ಟಿಕ್ಸ್ಅನ್ನು ಎಸ್ಐಆರ್ ಆಕ್ರಮಿಸಿ ಕೊಂಡಿದೆ. ಆದ್ದರಿಂದ, ಚುನಾವಣೆ<br>ಗಳನ್ನು ನಡೆಸುವಲ್ಲಿ ಕೋರಿದ ಸಮಯ ವಿಸ್ತರಣೆಯು ವಿಶ್ವಾಸಾರ್ಹವಾಗಿದೆ’ ಎಂದು ಆಯೋಗ ಹೇಳಿದೆ.</p>.<p>‘ರಾಜ್ಯ ಸರ್ಕಾರದ ಸಹಾಯದಿಂದ ಆಯೋಗವು ಚುನಾವಣೆಗಳನ್ನು ನಡೆಸುತ್ತದೆ. ಆದರೆ, ಜನಗಣತಿ, ಎಸ್ಐಆರ್ ಇತ್ಯಾದಿ ನಡೆಸಲು ರಾಜ್ಯ ಸರ್ಕಾರವು ಮಾನವ ಸಂಪನ್ಮೂಲ ವನ್ನು ನಿಯೋಜಿಸಿದೆ. ಹೀಗಾಗಿ, ಅಗತ್ಯವಿರುವ ಮಾನವ ಸಂಪನ್ಮೂಲ ಮತ್ತು ಲಾಜಿಸ್ಟಿಕ್ಸ್ ರಾಜ್ಯ ಸರ್ಕಾರದಲ್ಲಿ ಲಭ್ಯವಿಲ್ಲದಿರಬಹುದು’ ಎಂದು ಆಯೋಗ ಅಭಿಪ್ರಾಯಪಟ್ಟಿದೆ. </p>.<p>ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಯಾವುದೇ ನಿಧಿ ಅಥವಾ ಸಿಬ್ಬಂದಿ ಇಲ್ಲ ಎಂದು ಆಯೋಗ ಈ ಹಿಂದೆ ಹೇಳಿತ್ತು.</p>.<p><strong>ನಿಲುವು ಬದಲಿಸಿದ ಆಯೋಗ</strong></p><p>‘ಐದು ನಗರ ಪಾಲಿಕೆಗಳಿಗೆ ಜೂನ್ 14ರಿಂದ 24ರ ಅವಧಿಯಲ್ಲಿ ಚುನಾವಣೆ ನಡೆಸಲಾಗುವುದು. ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಿ.ಎಸ್. ಸಂಗ್ರೇಶಿ ಕಳೆದ ಶುಕ್ರವಾರ ಹೇಳಿಕೆ ನೀಡಿದ್ದರು. ಮೂರೇ ದಿನಗಳಲ್ಲಿ ಆಯೋಗ ಮತ್ತೊಮ್ಮೆ ನಿಲುವು ಬದಲಿಸಿದೆ. </p>.<p><strong>ಹಣಕಾಸಿನ ಕೊರತೆ ಇಲ್ಲ</strong></p><p>ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆಗಳನ್ನು ನಡೆಸಲು ಹಣದ ಕೊರತೆಯಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರವು 2026-27ನೇ ಸಾಲಿಗೆ ‘ರಾಜ್ಯಗಳಲ್ಲಿನ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ₹150 ಕೋಟಿ ಹಂಚಿಕೆ ಮಾಡಿದೆ ಮತ್ತು ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆಗಳ ಸಿದ್ಧತೆಗಳನ್ನು ಮಾಡಲು ಮೊದಲ ಕಂತಾಗಿ ₹37.50 ಕೋಟಿ ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು 2026-27ರ ಹಣಕಾಸು ವರ್ಷಕ್ಕೆ ತನ್ನ ಬಜೆಟ್ನಲ್ಲಿ ಚುನಾವಣಾ ಅನುದಾನವಾಗಿ ₹100 ಕೋಟಿ ಹಂಚಿಕೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ. ಇದಲ್ಲದೆ ಈ ಚುನಾವಣೆಗಳಿಗೆ ಪ್ರತ್ಯೇಕವಾಗಿ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಾಧಿಕಾರವು ಈಗಾಗಲೇ ₹25 ಕೋಟಿ ಬಿಡುಗಡೆ ಮಾಡಿದೆ ಎಂದೂ ಸರ್ಕಾರ ಮಾಹಿತಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>