<p><strong>ಬೆಂಗಳೂರು</strong>: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ನಡೆಯಬೇಕಿರುವ ಚುನಾವಣೆಗಳ ಸಿದ್ಧತೆಗಾಗಿ ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ಜೆಡಿಎಸ್ ರಚಿಸಿದೆ.</p>.<p>ಇದೇ 16ರಂದು ನಡೆದಿದ್ದ ಪಕ್ಷದ ಪ್ರಮುಖರ ಸಭೆಯಲ್ಲಿ ಉಸ್ತುವಾರಿ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿತ್ತು. ಅದರಂತೆ ಸಮಿತಿಯನ್ನು ರಚಿಸಿ, ಪಕ್ಷದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.</p>.<p>ಪಕ್ಷದ ಒಂಬತ್ತು ಹಿರಿಯ ನಾಯಕರನ್ನು ಈ ಸಮಿತಿಯು ಹೊಂದಿದೆ. ಶಾಸಕರಾದ ಎ.ಮಂಜು, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ತಿನ ಸದಸ್ಯರಾದ ಟಿ.ಎ.ಶರವಣ, ಟಿ.ಎನ್.ಜವರಾಯಿಗೌಡ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ನಾಯಕರಾದ ಎಂ.ಕೃಷ್ಣಾರೆಡ್ಡಿ, ಸುರೇಶ್ ಗೌಡ, ಎ.ಮಂಜುನಾಥ್ ಮತ್ತು ಕೆ.ಎ.ತಿಪ್ಪೇಸ್ವಾಮಿ ಅವರು ಈ ಸಮಿತಿಯಲ್ಲಿ ಇದ್ದಾರೆ.</p>.<p>ಜಿಬಿಎಯ ಐದೂ ಪಾಲಿಕೆಗಳಲ್ಲಿ ವಾರ್ಡ್ವಾರು ಉಸ್ತುವಾರಿ ಸಮಿತಿಗಳನ್ನು ರಚಿಸುವ, ಸದಸ್ಯತ್ವ ನೋಂದಣಿ ಅಭಿಯಾನ ನಡೆಸುವ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವ, ಉಪಸಮಿತಿಗಳ ಮೇಲ್ವಿಚಾರಣೆ ಮತ್ತು ಬಿಜೆಪಿ ಜತೆಗೆ ಸಮನ್ವಯ ಸಾಧಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ನೀಡಲಾಗಿದೆ ಎಂದು ಜೆಡಿಎಸ್ನ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ನಡೆಯಬೇಕಿರುವ ಚುನಾವಣೆಗಳ ಸಿದ್ಧತೆಗಾಗಿ ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ಜೆಡಿಎಸ್ ರಚಿಸಿದೆ.</p>.<p>ಇದೇ 16ರಂದು ನಡೆದಿದ್ದ ಪಕ್ಷದ ಪ್ರಮುಖರ ಸಭೆಯಲ್ಲಿ ಉಸ್ತುವಾರಿ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿತ್ತು. ಅದರಂತೆ ಸಮಿತಿಯನ್ನು ರಚಿಸಿ, ಪಕ್ಷದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.</p>.<p>ಪಕ್ಷದ ಒಂಬತ್ತು ಹಿರಿಯ ನಾಯಕರನ್ನು ಈ ಸಮಿತಿಯು ಹೊಂದಿದೆ. ಶಾಸಕರಾದ ಎ.ಮಂಜು, ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ತಿನ ಸದಸ್ಯರಾದ ಟಿ.ಎ.ಶರವಣ, ಟಿ.ಎನ್.ಜವರಾಯಿಗೌಡ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷದ ನಾಯಕರಾದ ಎಂ.ಕೃಷ್ಣಾರೆಡ್ಡಿ, ಸುರೇಶ್ ಗೌಡ, ಎ.ಮಂಜುನಾಥ್ ಮತ್ತು ಕೆ.ಎ.ತಿಪ್ಪೇಸ್ವಾಮಿ ಅವರು ಈ ಸಮಿತಿಯಲ್ಲಿ ಇದ್ದಾರೆ.</p>.<p>ಜಿಬಿಎಯ ಐದೂ ಪಾಲಿಕೆಗಳಲ್ಲಿ ವಾರ್ಡ್ವಾರು ಉಸ್ತುವಾರಿ ಸಮಿತಿಗಳನ್ನು ರಚಿಸುವ, ಸದಸ್ಯತ್ವ ನೋಂದಣಿ ಅಭಿಯಾನ ನಡೆಸುವ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುವ, ಉಪಸಮಿತಿಗಳ ಮೇಲ್ವಿಚಾರಣೆ ಮತ್ತು ಬಿಜೆಪಿ ಜತೆಗೆ ಸಮನ್ವಯ ಸಾಧಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ನೀಡಲಾಗಿದೆ ಎಂದು ಜೆಡಿಎಸ್ನ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>