<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಸ್ ಸೇರಿದಂತೆ ಎಲ್ಲ ಬಗೆಯ ಜಾಹೀರಾತುಗಳನ್ನು ಒಂದು ವರ್ಷಗಳ ಅವಧಿಗೆ ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ<br />ಆದೇಶಿಸಿದೆ.</p>.<p>ಈ ಕುರಿತ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ‘ಏಕಸದಸ್ಯ ನ್ಯಾಯಪೀಠ ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಬಹುದು’ ಎಂದು ಆದೇಶಿಸಿತು.</p>.<p>‘ಜಾಹೀರಾತು ಕುರಿತಾದ ಅರ್ಜಿಗಳ ಬಗ್ಗೆ ಈಗಾಗಲೇ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸುತ್ತಿದೆ. ಆದ್ದರಿಂದ ಈ ವಿಷಯಕ್ಕೆ ಸಂಬಂಧಿಸಿದ ಮತ್ತೊಂದು ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ’ ಎಂದು ಏಕಸದಸ್ಯ ನ್ಯಾಯಪೀಠ ಹೇಳಿತ್ತು. ಇದನ್ನು ಅರ್ಜಿದಾರರು ಪ್ರಶ್ನಿಸಿದ್ದರು.</p>.<p>ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು.</p>.<p>ಒಂದು ವರ್ಷದ ಮಟ್ಟಿಗೆ ಬೆಂಗಳೂರು ನಗರದಲ್ಲಿ ಎಲ್ಲ ಬಗೆಯ ಜಾಹೀರಾತುಗಳನ್ನು ನಿಷೇಧಿಸಿ ಬಿಬಿಎಂಪಿ 2018ರ ಆಗಸ್ಟ್ 6ರಂದು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. ಇದನ್ನು ಅರ್ಜಿದಾರರು ಏಕಸದಸ್ಯ ನ್ಯಾಯಪೀಠದಲ್ಲಿ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಸ್ ಸೇರಿದಂತೆ ಎಲ್ಲ ಬಗೆಯ ಜಾಹೀರಾತುಗಳನ್ನು ಒಂದು ವರ್ಷಗಳ ಅವಧಿಗೆ ನಿಷೇಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ<br />ಆದೇಶಿಸಿದೆ.</p>.<p>ಈ ಕುರಿತ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ‘ಏಕಸದಸ್ಯ ನ್ಯಾಯಪೀಠ ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಬಹುದು’ ಎಂದು ಆದೇಶಿಸಿತು.</p>.<p>‘ಜಾಹೀರಾತು ಕುರಿತಾದ ಅರ್ಜಿಗಳ ಬಗ್ಗೆ ಈಗಾಗಲೇ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸುತ್ತಿದೆ. ಆದ್ದರಿಂದ ಈ ವಿಷಯಕ್ಕೆ ಸಂಬಂಧಿಸಿದ ಮತ್ತೊಂದು ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ’ ಎಂದು ಏಕಸದಸ್ಯ ನ್ಯಾಯಪೀಠ ಹೇಳಿತ್ತು. ಇದನ್ನು ಅರ್ಜಿದಾರರು ಪ್ರಶ್ನಿಸಿದ್ದರು.</p>.<p>ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು.</p>.<p>ಒಂದು ವರ್ಷದ ಮಟ್ಟಿಗೆ ಬೆಂಗಳೂರು ನಗರದಲ್ಲಿ ಎಲ್ಲ ಬಗೆಯ ಜಾಹೀರಾತುಗಳನ್ನು ನಿಷೇಧಿಸಿ ಬಿಬಿಎಂಪಿ 2018ರ ಆಗಸ್ಟ್ 6ರಂದು ಬಿಬಿಎಂಪಿ ನಿರ್ಧಾರ ಕೈಗೊಂಡಿದೆ. ಇದನ್ನು ಅರ್ಜಿದಾರರು ಏಕಸದಸ್ಯ ನ್ಯಾಯಪೀಠದಲ್ಲಿ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>