‘ಸಾಂಕ್ರಾಮಿಕ ಕಾಯಿಲೆಯಾದ ಕೋವಿಡ್ಗೆ ಜಗತ್ತು ತಲ್ಲಣಗೊಂಡಿದೆ. ಹೀಗಾಗಿ, ಈ ಅವಧಿಯಲ್ಲಿ ನಾವು ಕೂಡ ಕಷ್ಟದಲ್ಲಿರುವವರಿಗೆ ಏನಾದರೂ ಮಾಡಬೇಕು ಅಂದುಕೊಂಡೆವು. ಸಾಮಾಜಿಕ ಕಾರ್ಯಕರ್ತೆಯಾದ ಅನುಪಮಾ ಪರೇಖ್ ಅವರು ಸೂಕ್ತ ಮಾರ್ಗದರ್ಶನ ನೀಡಿ, ಈ ಕಾರ್ಯಕೈಗೊಳ್ಳಲು ಪ್ರೋತ್ಸಾಹಿಸಿದರು. ಇದೇ ರೀತಿ, ಇನ್ನಷ್ಟು ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳಲು ಉತ್ಸುಕನಾಗಿದ್ದೇನೆ. ಇಂತಹ ಕಾರ್ಯಚಟುವಟಿಯಲ್ಲಿ ತೊಡಗಿಕೊಳ್ಳಲುಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮುಂದೆ ಬರಬೇಕು’ ಎಂದು ಶ್ಲೋಕಾ ಅಶೋಕ್ ತಿಳಿಸಿದರು.