<p><strong>ಬೆಂಗಳೂರು</strong>: ಸಾಹಿತ್ಯಲೋಕಕ್ಕೆ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಕೊಡುಗೆ ಅನುಪಮವಾದುದು. ಜಾತಿ ಮತಗಳನ್ನು ಮೀರಿ ತಮ್ಮ ವೈಚಾರಿಕ ಚಿಂತನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಸಮೃದ್ದಗೊಳಿಸಿದರು ಎಂದು ವಿಮರ್ಶಕಿ ಎಂ.ಎಸ್. ಆಶಾದೇವಿ ತಿಳಿಸಿದರು.</p>.<p>ವಿಜಯನಗರದ ಬಸವೇಶ್ವರ ಕಾಲೇಜಿನಲ್ಲಿ ನಡೆದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೌಢ್ಯ ಮತ್ತು ಮೂಢನಂಬಿಕೆಯ ವಿರುದ್ಧ ಜಿಎಸ್ಎಸ್ ಅವರ ಹೋರಾಟ ನಿರಂತರವಾಗಿತ್ತು. ಕುವೆಂಪು ಅವರ ಅತ್ಯಂತ ನಿಕಟವರ್ತಿಯಾಗಿದ್ದ ಜಿಎಸ್ಎಸ್ ನಮ್ಮ ನಡುವಿನ ಮಹಾನ್ ಚೈತನ್ಯ ಶಕ್ತಿ’ ಎಂದು ಅವರು ಬಣ್ಣಿಸಿದರು.</p>.<p>ಕಾರ್ಯಕ್ರಮದಲ್ಲಿ ಲಂಡನ್ನ ಪ್ರಸಿದ್ಧ ಕನ್ನಡ ಕವಿ ಹಾಗೂ ಜಿ.ಎಸ್.ಶಿವರುದ್ರಪ್ಪ ಅವರ ಪುತ್ರ ಜಿ.ಎಸ್.ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಪ್ರಸಾದ್, ‘ಜಿಎಸ್ಎಸ್ ಅವರ ಬದುಕು ಮತ್ತು ಬರಹ ಒಂದೇ ಆಗಿತ್ತು. ನುಡಿದಂತೆ, ಬರೆದಂತೆ ನಡೆಯುತ್ತಿದ್ದರು. ತಮ್ಮ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದರು‘ ಎಂದು ನೆನಪಿಸಿಕೊಂಡರು.</p>.<p>ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ಅಧ್ಯಕ್ಷತೆ ವಹಿಸಿದ್ದರು. ರಂಗಕರ್ಮಿ ನಾಗರಾಜ ಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಮೌಳಿ, ಮಧುರ ಅಶೋಕ್ ಕುಮಾರ್, ಸಂಗಮೇಶ ಗೌಡಪ್ಪ. ಪ್ರೇಮಾ ಶಾಂತವೀರಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಹಿತ್ಯಲೋಕಕ್ಕೆ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಕೊಡುಗೆ ಅನುಪಮವಾದುದು. ಜಾತಿ ಮತಗಳನ್ನು ಮೀರಿ ತಮ್ಮ ವೈಚಾರಿಕ ಚಿಂತನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಸಮೃದ್ದಗೊಳಿಸಿದರು ಎಂದು ವಿಮರ್ಶಕಿ ಎಂ.ಎಸ್. ಆಶಾದೇವಿ ತಿಳಿಸಿದರು.</p>.<p>ವಿಜಯನಗರದ ಬಸವೇಶ್ವರ ಕಾಲೇಜಿನಲ್ಲಿ ನಡೆದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೌಢ್ಯ ಮತ್ತು ಮೂಢನಂಬಿಕೆಯ ವಿರುದ್ಧ ಜಿಎಸ್ಎಸ್ ಅವರ ಹೋರಾಟ ನಿರಂತರವಾಗಿತ್ತು. ಕುವೆಂಪು ಅವರ ಅತ್ಯಂತ ನಿಕಟವರ್ತಿಯಾಗಿದ್ದ ಜಿಎಸ್ಎಸ್ ನಮ್ಮ ನಡುವಿನ ಮಹಾನ್ ಚೈತನ್ಯ ಶಕ್ತಿ’ ಎಂದು ಅವರು ಬಣ್ಣಿಸಿದರು.</p>.<p>ಕಾರ್ಯಕ್ರಮದಲ್ಲಿ ಲಂಡನ್ನ ಪ್ರಸಿದ್ಧ ಕನ್ನಡ ಕವಿ ಹಾಗೂ ಜಿ.ಎಸ್.ಶಿವರುದ್ರಪ್ಪ ಅವರ ಪುತ್ರ ಜಿ.ಎಸ್.ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಪ್ರಸಾದ್, ‘ಜಿಎಸ್ಎಸ್ ಅವರ ಬದುಕು ಮತ್ತು ಬರಹ ಒಂದೇ ಆಗಿತ್ತು. ನುಡಿದಂತೆ, ಬರೆದಂತೆ ನಡೆಯುತ್ತಿದ್ದರು. ತಮ್ಮ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದರು‘ ಎಂದು ನೆನಪಿಸಿಕೊಂಡರು.</p>.<p>ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ಅಧ್ಯಕ್ಷತೆ ವಹಿಸಿದ್ದರು. ರಂಗಕರ್ಮಿ ನಾಗರಾಜ ಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಮೌಳಿ, ಮಧುರ ಅಶೋಕ್ ಕುಮಾರ್, ಸಂಗಮೇಶ ಗೌಡಪ್ಪ. ಪ್ರೇಮಾ ಶಾಂತವೀರಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>