<p><strong>ಬೆಂಗಳೂರು</strong>: ‘ಜಿಎಸ್ಟಿ ತೆರಿಗೆಯನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಎಂದರೆ ಕರ್ನಾಟಕ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ವಾಣಿಜ್ಯ ತೆರಿಗೆ ಇಲಾಖೆಯಿಂದ ಆಯೋಜಿಸಿದ್ದ ಜಿಎಸ್ಟಿ ದಿನಾಚರಣೆ ಉದ್ಘಾಟನೆ ಮತ್ತು ಮುಖ್ಯಮಂತ್ರಿ ಪ್ರಶಸ್ತಿ ಪದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತೆರಿಗೆ ವಿಧಾನದಲ್ಲಿನ ಬದಲಾವಣೆಗೆ ಹೊಂದಿಕೊಳ್ಳುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿನ ಸದೃಢ, ಪರಿಣತ ತೆರಿಗೆ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಇಂತಹ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲು ಸಾಧ್ಯವಾಯಿತು ಎಂದರು.</p>.<p>‘ತೆರಿಗೆ ಹೆಚ್ಚಿಸದೆ, ರಾಜಸ್ವ ಸಂಗ್ರಹ ಹೆಚ್ಚಲಿದೆ ಎಂಬ ಅರಿವಿದ್ದೇ ರಾಜ್ಯ ಆಯವ್ಯಯದಲ್ಲಿ ತೆರಿಗೆ ವಿಧಿಸಲಿಲ್ಲ. ಕೋವಿಡ್ ಸಂದರ್ಭದಲ್ಲಿ 2021ರ ಆಗಸ್ಟ್-ಸೆಪ್ಟೆಂಬರ್ನಲ್ಲಿ ಪರಿಶೀಲನೆ ಮಾಡಿದಾಗ ಗುರಿಗಿಂತ ₹2000 ಕೋಟಿ ಕಡಿಮೆ ಇತ್ತು. ಆರು ತಿಂಗಳಲ್ಲಿ ಗುರಿ ಮೀರಿ ₹15,000 ಕೋಟಿ ಸಂಗ್ರಹಿಸಲಾಯಿತು. ಈ ಪೈಕಿ ₹7 ಸಾವಿರ ಕೋಟಿ ಜಿಎಸ್ಟಿಯಿಂದಲೇ ಬಂದಿತ್ತು. ಒಳ್ಳೆಯ ಕೆಲಸ ಮಾಡಿರುವ ಅಧಿಕಾರಿಗಳನ್ನು ಗುರುತಿಸಿ ಪ್ರಶಸ್ತಿ ನೀಡುವ ಕೆಲಸವನ್ನು ಈ ವರ್ಷ ಆರಂಭಿಸಲಾಗಿದೆ. ಮುಂದೆ ಪ್ರತಿವರ್ಷ ಪ್ರಶಸ್ತಿ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜಿಎಸ್ಟಿ ತೆರಿಗೆಯನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಎಂದರೆ ಕರ್ನಾಟಕ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ವಾಣಿಜ್ಯ ತೆರಿಗೆ ಇಲಾಖೆಯಿಂದ ಆಯೋಜಿಸಿದ್ದ ಜಿಎಸ್ಟಿ ದಿನಾಚರಣೆ ಉದ್ಘಾಟನೆ ಮತ್ತು ಮುಖ್ಯಮಂತ್ರಿ ಪ್ರಶಸ್ತಿ ಪದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತೆರಿಗೆ ವಿಧಾನದಲ್ಲಿನ ಬದಲಾವಣೆಗೆ ಹೊಂದಿಕೊಳ್ಳುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿನ ಸದೃಢ, ಪರಿಣತ ತೆರಿಗೆ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಇಂತಹ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲು ಸಾಧ್ಯವಾಯಿತು ಎಂದರು.</p>.<p>‘ತೆರಿಗೆ ಹೆಚ್ಚಿಸದೆ, ರಾಜಸ್ವ ಸಂಗ್ರಹ ಹೆಚ್ಚಲಿದೆ ಎಂಬ ಅರಿವಿದ್ದೇ ರಾಜ್ಯ ಆಯವ್ಯಯದಲ್ಲಿ ತೆರಿಗೆ ವಿಧಿಸಲಿಲ್ಲ. ಕೋವಿಡ್ ಸಂದರ್ಭದಲ್ಲಿ 2021ರ ಆಗಸ್ಟ್-ಸೆಪ್ಟೆಂಬರ್ನಲ್ಲಿ ಪರಿಶೀಲನೆ ಮಾಡಿದಾಗ ಗುರಿಗಿಂತ ₹2000 ಕೋಟಿ ಕಡಿಮೆ ಇತ್ತು. ಆರು ತಿಂಗಳಲ್ಲಿ ಗುರಿ ಮೀರಿ ₹15,000 ಕೋಟಿ ಸಂಗ್ರಹಿಸಲಾಯಿತು. ಈ ಪೈಕಿ ₹7 ಸಾವಿರ ಕೋಟಿ ಜಿಎಸ್ಟಿಯಿಂದಲೇ ಬಂದಿತ್ತು. ಒಳ್ಳೆಯ ಕೆಲಸ ಮಾಡಿರುವ ಅಧಿಕಾರಿಗಳನ್ನು ಗುರುತಿಸಿ ಪ್ರಶಸ್ತಿ ನೀಡುವ ಕೆಲಸವನ್ನು ಈ ವರ್ಷ ಆರಂಭಿಸಲಾಗಿದೆ. ಮುಂದೆ ಪ್ರತಿವರ್ಷ ಪ್ರಶಸ್ತಿ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>