‘ತೆರಿಗೆ ಹೆಚ್ಚಿಸದೆ, ರಾಜಸ್ವ ಸಂಗ್ರಹ ಹೆಚ್ಚಲಿದೆ ಎಂಬ ಅರಿವಿದ್ದೇ ರಾಜ್ಯ ಆಯವ್ಯಯದಲ್ಲಿ ತೆರಿಗೆ ವಿಧಿಸಲಿಲ್ಲ. ಕೋವಿಡ್ ಸಂದರ್ಭದಲ್ಲಿ 2021ರ ಆಗಸ್ಟ್-ಸೆಪ್ಟೆಂಬರ್ನಲ್ಲಿ ಪರಿಶೀಲನೆ ಮಾಡಿದಾಗ ಗುರಿಗಿಂತ ₹2000 ಕೋಟಿ ಕಡಿಮೆ ಇತ್ತು. ಆರು ತಿಂಗಳಲ್ಲಿ ಗುರಿ ಮೀರಿ ₹15,000 ಕೋಟಿ ಸಂಗ್ರಹಿಸಲಾಯಿತು. ಈ ಪೈಕಿ ₹7 ಸಾವಿರ ಕೋಟಿ ಜಿಎಸ್ಟಿಯಿಂದಲೇ ಬಂದಿತ್ತು. ಒಳ್ಳೆಯ ಕೆಲಸ ಮಾಡಿರುವ ಅಧಿಕಾರಿಗಳನ್ನು ಗುರುತಿಸಿ ಪ್ರಶಸ್ತಿ ನೀಡುವ ಕೆಲಸವನ್ನು ಈ ವರ್ಷ ಆರಂಭಿಸಲಾಗಿದೆ. ಮುಂದೆ ಪ್ರತಿವರ್ಷ ಪ್ರಶಸ್ತಿ ನೀಡಲಾಗುವುದು’ ಎಂದು ಹೇಳಿದರು.