ಜಿಎಸ್ಟಿ ಪರಿಹಾರ– ಬಾಕಿ ಪಾವತಿಗೆ ಕ್ರಮ: ನಿರ್ಮಲಾ ಸೀತಾರಾಮನ್

ಯಲಹಂಕ: ’ರಾಜ್ಯಗಳಿಗೆ ಬಾಕಿಯಿರುವ ಜಿಎಸ್ಟಿ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷದಷ್ಟೇ ಈ ವರ್ಷವೂ ಪರಿಹಾರ ಸಿಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬೋಯಿಂಗ್ ಡಿಫೆನ್ಸ್, ಸೆಲ್ಕೋ ಫೌಂಡೇಷನ್ ಹಾಗೂ ಡಾಕ್ಟರ್ಸ್ ಫಾರ್ ಯು ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ವಿದ್ಯುತ್ ನಿಗಮದ ಆವರಣದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ವಿವಿಧ ವಿಭಾಗಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
’ಜಿಎಸ್ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ವಿಶೇಷ ಸಭೆ ನಡೆಸಿ, ಈ ವಿಚಾರದಲ್ಲಿ ಉಂಟಾಗಿರುವ ರಾಜ್ಯಗಳ ತರಕಾರುಗಳನ್ನು ಬಗೆಹರಿಸಿ, ಶಿಘ್ರದಲ್ಲೇ ಪರಿಹಾರ ಒದಗಿಸಲು ಕ್ರಮಕೈಗೊಳ್ಳಲಾಗುವುದು. ಮುಂಬರುವ ಸಂಸತ್ ಅಧಿವೇಶನದಲ್ಲಿಯೂ ಜಿಎಸ್ಟಿ ಪರಿಹಾರ ಕುರಿತು ವಿಶೇಷಕಲಾಪ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯಗಳ ಜಿಎಸ್ಟಿ ಪರಿಹಾರದ ಬಗ್ಗೆಯೇ ಚರ್ಚೆ ನಡೆಸಲಾಗುತ್ತದೆ‘ ಎಂದು ತಿಳಿಸಿದರು.
ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ವಿಶೇಷವಾದ ಪ್ರತ್ಯೇಕ ವಾರ್ಡ್ಗಳನ್ನು ನಿರ್ಮಿಸಲಾಗಿದೆ. ಹೈಟೆಕ್ ಆಸ್ಪತ್ರೆಯಲ್ಲಿ ಇರಬೇಕಾದ ಎಲ್ಲರೀತಿಯ ಸೌಲಭ್ಯಗಳನ್ನು ಈ ಆಸ್ಪತ್ರೆ ಹೊಂದಿದ್ದು, ಇದೇ ಮಾದರಿಯ ಆಸ್ಪತ್ರೆಗಳನ್ನು ವಿವಿಧ ಭಾಗಗಳಲ್ಲಿ ಸ್ಥಾಪಿಸುವಂತೆ ಮನವಿ ಮಾಡಲಾಗುವುದು ಎಂದರು.
ಬೋಯಿಂಗ್ ಡಿಫೆನ್ಸ್ ಇಂಡಿಯಾದ ಅಧ್ಯಕ್ಷ ಸಲೀಲ್ ಗುಪ್ತೆ, ಸೆಲ್ಕೋ ಫೌಂಡೇಷನ್ ಸಂಸ್ಥಾಪಕ ಡಾ.ಹರೀಶ್ ಹಂದೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.