ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ. ಅಮ್ಜದ್, ‘ಸರ್ಕಾರದ ಗೃಹಲಕ್ಷ್ಮಿ, ಶಕ್ತಿಯೋಜನೆ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳು ಫಲಾನುಭವಿಗಳಿಗೆ ತಲುಪಿರುವ ಕುರಿತು ಮಾಹಿತಿ ಸಂಗ್ರಹಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗುತ್ತಿದೆ. 100ರಿಂದ 120 ಮನೆಗಳ ಸಮೀಕ್ಷೆ ನಡೆಸಿದ ಕಾರ್ಯಕರ್ತೆಯರಿಗೆ ₹1 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಆದೇಶ ಹೊರಡಿಸಲಾಗಿದೆ. ಆದರೆ, ಇದರಿಂದ ಅಂಗನವಾಡಿ ಕೆಲಸದ ಹೊಣೆಗಾರಿಕೆ ನಿಭಾಯಿಸುವುದು ಕಷ್ಟವಾಗಲಿದೆ’ ಎಂದು ತಿಳಿಸಿದರು.