<p><strong>ಬೆಂಗಳೂರು</strong>: ಶುಭ ಸಮಾರಂಭ ನಡೆಯುವ ಕಲ್ಯಾಣ ಮಂಟಪಗಳಿಗೆ ಸಂಬಂಧಿಕರಂತೆ ಹೋಗಿ ಚಿನ್ನಾಭರಣ ಹಾಗೂ ಹಣ ಕಳವು ಮಾಡುತ್ತಿದ್ದ ಮಹಿಳೆಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ರೇವತಿ (46) ಎಂಬಾಕೆಯನ್ನು ಬಂಧಿಸಿ, ₹32 ಲಕ್ಷ ಮೌಲ್ಯದ 262 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕೆ.ಆರ್.ಪುರದಲ್ಲಿ ವಾಸವಾಗಿದ್ದು, ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು.</p>.<p>ಚಿಕ್ಕಲಸಂದ್ರದ ಮಂಜುನಾಥ ನಗರದಲ್ಲಿ ವಾಸವಿರುವ ನಿವಾಸಿಯೊಬ್ಬರು ನವೆಂಬರ್ 23ರ ಬೆಳಿಗ್ಗೆ ಸಂಬಂಧಿಕರ ಮದುವೆಗೆಂದು ತಾಯಿಯ ಜತೆ ಬಸವನಗುಡಿಯಲ್ಲಿರುವ ಕಲ್ಯಾಣಮಂಟಪಕ್ಕೆ ಹೋಗಿ ಕೊಠಡಿಯಲ್ಲಿ ಬ್ಯಾಗ್ ಇಟ್ಟಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ನಂತರ ಮನೆಗೆ ಹೋಗಿ ಬ್ಯಾಗ್ ನೋಡಿದಾಗ ಅದರಲ್ಲಿಟ್ಟಿದ್ದ ಸುಮಾರು ₹3 ಲಕ್ಷ ಬೆಲೆ ಬಾಳುವ ಚಿನ್ನದ ಸರ, ಗೆಜ್ಜೆ ಕಳುವಾಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.</p>.<p>ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಕಲ್ಯಾಣ ಮಂಟಪದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದರು. <br /><br />ಕದ್ದ ಚಿನ್ನಾಭರಣಗಳನ್ನು ಕಾಡುಬೀಸನಹಳ್ಳೀಯಲ್ಲಿರುವ ಬ್ಯಾಂಕ್ನಲ್ಲಿ ಪತಿ ಮತ್ತು ಆಕೆಯ ಹೆಸರಿನಲ್ಲಿ ಅಡಮಾನ ಇಟ್ಟು ಹಣ ಪಡೆಯಲಾಗಿತ್ತು. ವಾಸವಿರುವ ಬಾಡಿಗೆ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 3 ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 3 ಪ್ರಕರಣ ದಾಖಲಾಗಿರುವುದು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶುಭ ಸಮಾರಂಭ ನಡೆಯುವ ಕಲ್ಯಾಣ ಮಂಟಪಗಳಿಗೆ ಸಂಬಂಧಿಕರಂತೆ ಹೋಗಿ ಚಿನ್ನಾಭರಣ ಹಾಗೂ ಹಣ ಕಳವು ಮಾಡುತ್ತಿದ್ದ ಮಹಿಳೆಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ರೇವತಿ (46) ಎಂಬಾಕೆಯನ್ನು ಬಂಧಿಸಿ, ₹32 ಲಕ್ಷ ಮೌಲ್ಯದ 262 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕೆ.ಆರ್.ಪುರದಲ್ಲಿ ವಾಸವಾಗಿದ್ದು, ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು.</p>.<p>ಚಿಕ್ಕಲಸಂದ್ರದ ಮಂಜುನಾಥ ನಗರದಲ್ಲಿ ವಾಸವಿರುವ ನಿವಾಸಿಯೊಬ್ಬರು ನವೆಂಬರ್ 23ರ ಬೆಳಿಗ್ಗೆ ಸಂಬಂಧಿಕರ ಮದುವೆಗೆಂದು ತಾಯಿಯ ಜತೆ ಬಸವನಗುಡಿಯಲ್ಲಿರುವ ಕಲ್ಯಾಣಮಂಟಪಕ್ಕೆ ಹೋಗಿ ಕೊಠಡಿಯಲ್ಲಿ ಬ್ಯಾಗ್ ಇಟ್ಟಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ನಂತರ ಮನೆಗೆ ಹೋಗಿ ಬ್ಯಾಗ್ ನೋಡಿದಾಗ ಅದರಲ್ಲಿಟ್ಟಿದ್ದ ಸುಮಾರು ₹3 ಲಕ್ಷ ಬೆಲೆ ಬಾಳುವ ಚಿನ್ನದ ಸರ, ಗೆಜ್ಜೆ ಕಳುವಾಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.</p>.<p>ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಕಲ್ಯಾಣ ಮಂಟಪದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದರು. <br /><br />ಕದ್ದ ಚಿನ್ನಾಭರಣಗಳನ್ನು ಕಾಡುಬೀಸನಹಳ್ಳೀಯಲ್ಲಿರುವ ಬ್ಯಾಂಕ್ನಲ್ಲಿ ಪತಿ ಮತ್ತು ಆಕೆಯ ಹೆಸರಿನಲ್ಲಿ ಅಡಮಾನ ಇಟ್ಟು ಹಣ ಪಡೆಯಲಾಗಿತ್ತು. ವಾಸವಿರುವ ಬಾಡಿಗೆ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 3 ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 3 ಪ್ರಕರಣ ದಾಖಲಾಗಿರುವುದು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>