ಬೆಂಗಳೂರು: ‘ರಾಜ್ಯದಲ್ಲಿನ ಪದವಿ ಮತ್ತು ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಕಳೆದ ಮಾರ್ಚ್ನಿಂದ ಗೌರವ ಧನ ಪಾವತಿಸಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು ಮತ್ತು ಗೌರವಧನದ ಮೊತ್ತವನ್ನು ಹೆಚ್ಚಿಸಬೇಕು’ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ರಮೇಶ್ಬಾಬು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
‘ಲಾಕ್ಡೌನ್ ಕಾರಣ ಮಾ.22ರಿಂದ ಪದವಿ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಬಹಳಷ್ಟು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಆ ತಿಂಗಳ ಗೌರವ ಧನ ನೀಡಿಲ್ಲ, ಕೆಲವು ಕಾಲೇಜುಗಳಲ್ಲಿ ಅರ್ಧ ವೇತನ ಪಾವತಿಸಲಾಗಿದೆ’ ಎಂದು ಅವರು ದೂರಿದ್ದಾರೆ.
‘ಸಮ್ಮಿಶ್ರ ಸರ್ಕಾರದಲ್ಲಿ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹5ಸಾವಿರ ಹೆಚ್ಚುವರಿ ಗೌರವ ಧನ ನೀಡಲು ತೀರ್ಮಾನವಾಗಿದ್ದರೂ ಜಾರಿ ಆಗಿಲ್ಲ. ಅದನ್ನು ಜಾರಿ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.