<p><strong>ಬೆಂಗಳೂರು:</strong> ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>‘ಕಾಲೇಜುಗಳಲ್ಲಿ ಪ್ರಾಧ್ಯಾಪಕರಿಲ್ಲದೇ ತರಗತಿಗಳು ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರನ್ನೂ ನೇಮಿಸಿಕೊಳ್ಳುತ್ತಿಲ್ಲ. ಆದರೆ, ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆಗಳನ್ನು ವಿಶ್ವವಿದ್ಯಾಲಯಗಳು ಹೊರಡಿಸಿವೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ಪ್ರತಿಭಟನಕಾರರು ತೀರ್ಮಾನಿಸಿದರು.</p>.<p>ಬೆಂಗಳೂರಿನ ಸರ್ಕಾರಿ ಆರ್.ಸಿ ಕಾಲೇಜು, ಮಲ್ಲೇಶ್ವರ ಸರ್ಕಾರಿ ಪದವಿ ಕಾಲೇಜು, ಪೀಣ್ಯ ಸರ್ಕಾರಿ ಪದವಿ ಕಾಲೇಜು, ವಿಜಯನಗರ ಸರ್ಕಾರಿ ಪದವಿ ಕಾಲೇಜು ಸಹಿತ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಎಐಡಿಎಸ್ಒ ಜಿಲ್ಲಾ ಸಮಿತಿ ಅಧ್ಯಕ್ಷೆ ಅಪೂರ್ವ ಸಿ.ಎಂ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ವಿವಿಧ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>‘ಕಾಲೇಜುಗಳಲ್ಲಿ ಪ್ರಾಧ್ಯಾಪಕರಿಲ್ಲದೇ ತರಗತಿಗಳು ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರನ್ನೂ ನೇಮಿಸಿಕೊಳ್ಳುತ್ತಿಲ್ಲ. ಆದರೆ, ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆಗಳನ್ನು ವಿಶ್ವವಿದ್ಯಾಲಯಗಳು ಹೊರಡಿಸಿವೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ಪ್ರತಿಭಟನಕಾರರು ತೀರ್ಮಾನಿಸಿದರು.</p>.<p>ಬೆಂಗಳೂರಿನ ಸರ್ಕಾರಿ ಆರ್.ಸಿ ಕಾಲೇಜು, ಮಲ್ಲೇಶ್ವರ ಸರ್ಕಾರಿ ಪದವಿ ಕಾಲೇಜು, ಪೀಣ್ಯ ಸರ್ಕಾರಿ ಪದವಿ ಕಾಲೇಜು, ವಿಜಯನಗರ ಸರ್ಕಾರಿ ಪದವಿ ಕಾಲೇಜು ಸಹಿತ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಎಐಡಿಎಸ್ಒ ಜಿಲ್ಲಾ ಸಮಿತಿ ಅಧ್ಯಕ್ಷೆ ಅಪೂರ್ವ ಸಿ.ಎಂ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>