<p><strong>ಬೆಂಗಳೂರು</strong>: ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಇಟ್ಟುಕೊಂಡು ತನ್ನ ವಿರೋಧಿಗಳನ್ನು ಬೆದರಿಸುತ್ತಿದ್ದ ಆರೋಪಿಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ (ಪೂರ್ವ) ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ.</p>.<p>ರೋಷನ್ ಅಹಮದ್ ಅಲಿಯಾಸ್ ಬಾಬನ್ ಬಂಧಿತ.</p>.<p>ಆರೋಪಿಯಿಂದ ಪಿಸ್ತೂಲ್ ಹಾಗೂ ನಾಲ್ಕು ಜೀವಂತ ಗುಂಡು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.</p>.<p>ಆರೋಪಿ ಪಿಸ್ತೂಲ್ ಇಟ್ಟುಕೊಂಡು ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ ಬಗ್ಗೆ ಪೊಲೀಸ್ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದಿತ್ತು. ಆ ಮಾಹಿತಿ ಆಧರಿಸಿ ಸುದ್ದಗುಂಟೆಪಾಳ್ಯದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿಯಿರುವ ಖಾಲಿ ಜಾಗದಲ್ಲಿ ಆರೋಪಿ ಇರುವುದು ಗೊತ್ತಾಗಿತ್ತು. ಆ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.</p>.<p>‘ಮಧ್ಯಪ್ರದೇಶದಲ್ಲಿ ಪರಿಚಯವಿದ್ದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿದ್ದೆ. ಪಿಸ್ತೂಲ್ ಇಟ್ಟುಕೊಂಡು ತನ್ನ ವಿರೋಧಿಗಳನ್ನು ಹೆದರಿಸುತ್ತಿದ್ದೆ. ಅಲ್ಲದೇ ಅಪರಾಧ ಕೃತ್ಯ ಎಸಗಲು ಪಿಸ್ತೂಲ್ ಬಳಕೆ ಮಾಡಿಕೊಳ್ಳುತ್ತಿದ್ದೆ ಎಂಬುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಈ ಹಿಂದೆ ಆರೋಪಿಯನ್ನು ಮೈಕೊ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದರು’ ಎಂದು ಮೂಲಗಳು ಹೇಳಿವೆ.</p>.<p>ಆರೋಪಿಯ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಇಟ್ಟುಕೊಂಡು ತನ್ನ ವಿರೋಧಿಗಳನ್ನು ಬೆದರಿಸುತ್ತಿದ್ದ ಆರೋಪಿಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ (ಪೂರ್ವ) ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ.</p>.<p>ರೋಷನ್ ಅಹಮದ್ ಅಲಿಯಾಸ್ ಬಾಬನ್ ಬಂಧಿತ.</p>.<p>ಆರೋಪಿಯಿಂದ ಪಿಸ್ತೂಲ್ ಹಾಗೂ ನಾಲ್ಕು ಜೀವಂತ ಗುಂಡು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.</p>.<p>ಆರೋಪಿ ಪಿಸ್ತೂಲ್ ಇಟ್ಟುಕೊಂಡು ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ ಬಗ್ಗೆ ಪೊಲೀಸ್ ಬಾತ್ಮೀದಾರರಿಂದ ಖಚಿತ ಮಾಹಿತಿ ಬಂದಿತ್ತು. ಆ ಮಾಹಿತಿ ಆಧರಿಸಿ ಸುದ್ದಗುಂಟೆಪಾಳ್ಯದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿಯಿರುವ ಖಾಲಿ ಜಾಗದಲ್ಲಿ ಆರೋಪಿ ಇರುವುದು ಗೊತ್ತಾಗಿತ್ತು. ಆ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.</p>.<p>‘ಮಧ್ಯಪ್ರದೇಶದಲ್ಲಿ ಪರಿಚಯವಿದ್ದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿದ್ದೆ. ಪಿಸ್ತೂಲ್ ಇಟ್ಟುಕೊಂಡು ತನ್ನ ವಿರೋಧಿಗಳನ್ನು ಹೆದರಿಸುತ್ತಿದ್ದೆ. ಅಲ್ಲದೇ ಅಪರಾಧ ಕೃತ್ಯ ಎಸಗಲು ಪಿಸ್ತೂಲ್ ಬಳಕೆ ಮಾಡಿಕೊಳ್ಳುತ್ತಿದ್ದೆ ಎಂಬುದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಅವರು ಮಾಹಿತಿ ನೀಡಿದರು.</p>.<p>‘ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಈ ಹಿಂದೆ ಆರೋಪಿಯನ್ನು ಮೈಕೊ ಲೇಔಟ್ ಠಾಣೆಯ ಪೊಲೀಸರು ಬಂಧಿಸಿದ್ದರು’ ಎಂದು ಮೂಲಗಳು ಹೇಳಿವೆ.</p>.<p>ಆರೋಪಿಯ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>