’ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಬಂದಿದ್ದ ವೇಳೆ, ತಾಜುದ್ದೀನ್ ಪರಾರಿಯಾಗಲು ಯತ್ನಿಸಿದ. ಅಲ್ಲದೆ, ಸ್ವಲ್ಪ ದೂರ ನಿಂತು ಪೊಲೀಸ್ ಮೇಲೆಯೇ ಕಲ್ಲು, ಇಟ್ಟಿಗೆ ತುಂಡುಗಳನ್ನು ಎಸೆದಿದ್ದ. ಈ ವೇಳೆ ಸಬ್ ಇನ್ಸ್ಪೆಕ್ಟರ್ ರೂಪಾ ಮತ್ತು ಹೆಡ್ ಕಾನ್ಸ್ಟೆಬಲ್ ಮಂಜಣ್ಣ ಎಂಬುವವರು ಗಾಯಗೊಂಡಿದ್ದರು. ತಕ್ಷಣ ಸಂಜಯನಗರ ಇನ್ಸ್ಪೆಕ್ಟರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆರೋಪಿ ಶರಣಾಗದಿದ್ದಾಗ ಎಡಗಾಲಿಗೆ ಗುಂಡು ಹೊಡೆದಿದ್ದಾರೆ’ ಎಂದು ಉತ್ತರವಲಯ ಡಿಸಿಪಿ ಶಶಿಕುಮಾರ್ ತಿಳಿಸಿದರು.