ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ತಜ್ಞೆ ಹಾಗೂ ಜಿ.ಆರ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಡಾ.ಗೀತಾ ರಾಮಾನುಜಂ ಅಧ್ಯಕ್ಷತೆ ವಹಿಸಿದ್ದರು. ವಾಸ್ಕ್ ಯೋಗ ಕೇಂದ್ರದ ಸಂಸ್ಥಾಪಕ ಉಮಾಮಹೇಶ್ವರ ಗುರೂಜಿ ಹಾಗೂ ತಬಲಾ ವಾದಕ ಸತೀಶ್ ಹಂಪಿಹೊಳಿ, ಶ್ರೀಗುರುಕುಮಾರ ಪಂಚಾಕ್ಷರೇಶ್ವರ ಸಂಗೀತ ಕಲಾವೇದಿಕೆ ಅಧ್ಯಕ್ಷ ನಾಗೇಂದ್ರ ಟಿ.ರಾಣಾಪೂರ್ ಉಪಸ್ಥಿತರಿದ್ದರು.