ಎರಡೂ ಸಹಕಾರಿ ಬ್ಯಾಂಕ್ಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆ, ಸಾಲ ವಸೂಲಾತಿ, ಪುನಶ್ಚೇತನ ಕುರಿತು ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈ ಎರಡೂ ಸಹಕಾರಿ ಬ್ಯಾಂಕ್ಗಳಲ್ಲಿನ ಅಕ್ರಮದ ಕುರಿತು ತನಿಖೆ ಆರಂಭವಾಗಿ ಮೂರು ವರ್ಷಗಳಾದರೂ ಸಾಲ ವಸೂಲಾತಿ ಆಗುತ್ತಿಲ್ಲ. ಈ ಕಾರಣದಿಂದ ತನಿಖೆಯನ್ನು ಸಿಬಿಐಗೆ ವಹಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.