<p><strong>ಬೆಂಗಳೂರು:</strong> ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಬ್ಯಾಂಕ್ ಅಧ್ಯಕ್ಷ ಕೆ. ರಾಮಕೃಷ್ಣ ಕೊನೆಗೂ ಸಿಐಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.</p>.<p>ಇವರ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಸಿಐಡಿ ಇತ್ತೀಚೆಗಷ್ಟೇ ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು.</p>.<p>‘ಬ್ಯಾಂಕ್ ಅವ್ಯವಹಾರ ಸಂಬಂಧ ರಾಮಕೃಷ್ಣ ಹಾಗೂ ಬ್ಯಾಂಕ್ನ 7 ನಿರ್ದೇಶಕರನ್ನು ಹೊರರಾಜ್ಯದಲ್ಲಿ ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿದೆ’ ಎಂದು ಸಿಐಡಿ ಅಧಿಕಾರಿಯೊಬ್ಬರು ಹೇಳಿದರು.</p>.<p>‘ತಲೆಮರೆಸಿಕೊಂಡಿದ್ದ ರಾಮಕೃಷ್ಣ, ಹಲವೆಡೆ ಓಡಾಡುತ್ತಿದ್ದರು. ಅವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿತ್ತು. ಇತ್ತೀಚೆಗೆ ಲಭ್ಯವಾಗಿದ್ದ ಸುಳಿವು ಆಧರಿಸಿ ಸಿಐಡಿಯ ವಿಶೇಷ ತಂಡ ಹೊರ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಎಲ್ಲರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದರು.</p>.<p>‘ರಾಜ್ಯಸಭಾ ಚುನಾವಣೆಗೂ ಸ್ಪರ್ಧಿಸಿದ್ದ ರಾಮಕೃಷ್ಣ, ಬ್ಯಾಂಕ್ನ ಅಧ್ಯಕ್ಷರಾಗಿದ್ದರು. ಬ್ಯಾಂಕ್ ಅವ್ಯವಹಾರ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದಾರೆ. ಅವರ ಕೆಲ ಸಂಬಂಧಿಕರನ್ನೂ ಬಂಧಿಸಲಾಗಿದೆ’ ಎಂದೂ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಬ್ಯಾಂಕ್ ಅಧ್ಯಕ್ಷ ಕೆ. ರಾಮಕೃಷ್ಣ ಕೊನೆಗೂ ಸಿಐಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.</p>.<p>ಇವರ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಸಿಐಡಿ ಇತ್ತೀಚೆಗಷ್ಟೇ ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು.</p>.<p>‘ಬ್ಯಾಂಕ್ ಅವ್ಯವಹಾರ ಸಂಬಂಧ ರಾಮಕೃಷ್ಣ ಹಾಗೂ ಬ್ಯಾಂಕ್ನ 7 ನಿರ್ದೇಶಕರನ್ನು ಹೊರರಾಜ್ಯದಲ್ಲಿ ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿದೆ’ ಎಂದು ಸಿಐಡಿ ಅಧಿಕಾರಿಯೊಬ್ಬರು ಹೇಳಿದರು.</p>.<p>‘ತಲೆಮರೆಸಿಕೊಂಡಿದ್ದ ರಾಮಕೃಷ್ಣ, ಹಲವೆಡೆ ಓಡಾಡುತ್ತಿದ್ದರು. ಅವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿತ್ತು. ಇತ್ತೀಚೆಗೆ ಲಭ್ಯವಾಗಿದ್ದ ಸುಳಿವು ಆಧರಿಸಿ ಸಿಐಡಿಯ ವಿಶೇಷ ತಂಡ ಹೊರ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಎಲ್ಲರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದರು.</p>.<p>‘ರಾಜ್ಯಸಭಾ ಚುನಾವಣೆಗೂ ಸ್ಪರ್ಧಿಸಿದ್ದ ರಾಮಕೃಷ್ಣ, ಬ್ಯಾಂಕ್ನ ಅಧ್ಯಕ್ಷರಾಗಿದ್ದರು. ಬ್ಯಾಂಕ್ ಅವ್ಯವಹಾರ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದಾರೆ. ಅವರ ಕೆಲ ಸಂಬಂಧಿಕರನ್ನೂ ಬಂಧಿಸಲಾಗಿದೆ’ ಎಂದೂ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>