ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ‘ಬ್ಯಾಂಕ್ ಅಧ್ಯಕ್ಷ ಹಾಗೂ ಇತರ ಆರೋಪಿಗಳ ₹ 1,000 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಬಹುದು’ ಎಂದು ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದೆ.