ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವ್ಯವಹಾರ ಪ್ರಕರಣ | ಸಿಬಿಐ ತನಿಖೆಗೆ ಆಗ್ರಹ: ಸಹಿ ಸಂಗ್ರಹ ಅಭಿಯಾನ

Last Updated 10 ಜನವರಿ 2023, 20:06 IST
ಅಕ್ಷರ ಗಾತ್ರ

ಬೆಂಗಳೂರು: ‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಲಿಮಿಟೆಡ್‌ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬ್ಯಾಂಕ್‌ನ ಠೇವಣಿದಾರರು ನಗರದಲ್ಲಿ ಮಂಗಳವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ಬಸನಗುಡಿಯಲ್ಲಿರುವ ಕಚೇರಿ ಎದುರು ಸೇರಿದ್ದ ಠೇವಣಿದಾರರು, ಭಿತ್ತಿಪತ್ರಗಳನ್ನು ಹಿಡಿದು ಕೆಲ ಹೊತ್ತು ಪ್ರತಿಭಟನೆ ಸಹ ನಡೆಸಿದರು.

‘ವಂಚನೆ ಪ್ರಕರಣ ನಡೆದು ಮೂರು ವರ್ಷವಾಗಿದೆ. ಠೇವಣಿದಾರರು ಹಾಗೂ ಷೇರುದಾರರಿಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಹೀಗಾಗಿ, ‍ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ನಾವೆಲ್ಲರೂ ಸಹಿ ಸಂಗ್ರಹ ಮಾಡುತ್ತಿದ್ದೇವೆ. ಸಹಿಯುಳ್ಳ ಮನವಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗುವುದು’ ಎಂದು
ಪ್ರತಿಭಟನಕಾರರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT