ಹಿತರಕ್ಷಣಾ ವೇದಿಕೆಯ ಮುಖ್ಯ ಪೋಷಕ ಡಾ.ಶಂಕರ ಗುಹಾ ದ್ವಾರಕಾನಾಥ್ ಬೆಳ್ಳೂರು,‘ಕಷ್ಟಪಟ್ಟು ದುಡಿದು ಕೂಡಿಟ್ಟಿದ್ದ ಹಣ ಕಳೆದುಕೊಂಡ ಠೇವಣಿದಾರರು ಕಂಗಾಲಾಗಿದ್ದಾರೆ. ಅವರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗುತ್ತಿಲ್ಲ. ಪ್ರಕರಣದ ತನಿಖೆಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಲಾಗುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರವೂ ನಡೆಯುತ್ತಿದೆ. ಬಸವನಗುಡಿ ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ ಅವರು ವಂಚಕರ ಪರ ನಿಲ್ಲದೆ, ಹೂಡಿಕೆದಾರರ ಹಿತ ಕಾಯಬೇಕು’ ಎಂದರು.