ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಠೇವಣಿದಾರರು, ‘ವಂಚಕರನ್ನು ಗಲ್ಲಿಗೇರಿಸಿ’, ‘ನಮ್ಮ ಹಣ ನಮಗೆ ಬೇಕು’ ಹಾಗೂ ‘ಹಿರಿಯ ನಾಗರಿಕರಿಗೆ ನ್ಯಾಯ ಕೊಡಿಸಿ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ‘ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣೆ ವೇದಿಕೆ’ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.