<p><strong>ಬೆಂಗಳೂರು:</strong> ‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಹಗರಣವನ್ನು ಸಿಬಿಐಗೆ ವಹಿಸಲು ಎಲ್ಲ ರೀತಿಯ ತಯಾರಿ ನಡೆದಿದೆ. ಮುಖ್ಯಮಂತ್ರಿ ಜೊತೆ ಸಮಾಲೋಚಿಸಿ, ಗೃಹ ಇಲಾಖೆ ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.</p>.<p>ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿಐಡಿ, ಸಹಕಾರ ಇಲಾಖೆ ಮತ್ತು ಇಡಿ (ಜಾರಿ ನಿರ್ದೇಶನಾಲಯ) ಹಗರಣದ ತನಿಖೆ ನಡೆಸಿ, ₹ 1,290 ಕೋಟಿ ವಂಚನೆಯನ್ನು ಪತ್ತೆಹಚ್ಚಿವೆ. ಸಿಐಡಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸಿಬಿಐಗೆ ವಹಿಸಿದರೆ ತನಿಖೆ ವಿಳಂಬ ಆಗಬಹುದು ಎಂಬ ಕಾರಣಕ್ಕೆ ತಡೆಹಿಡಿಯಲಾಗಿತ್ತು’ ಎಂದು ವಿವರಿಸಿದರು.</p>.<p>‘ಬ್ಯಾಂಕಿನಿಂದ ಸಾಲ ಪಡೆದವರ ಆಸ್ತಿ ಜಪ್ತಿ ಮಾಡಲು ಸಾಧ್ಯವಿಲ್ಲ. ಏಕೆಂದರೆ, ಅಡಮಾನಕ್ಕಾಗಿ<br />ನೀಡಿರುವ ದಾಖಲೆಗಳು ಬೇರೆಯವರಿಗೆ ಸೇರಿವೆ. ಸಾಲ ವಸೂಲಿ ಮಾಡುತ್ತಿದ್ದೇವೆ, ಆಸ್ತಿ ಜಪ್ತಿ ಮಾಡುತ್ತೇವೆ ಎನ್ನುತ್ತಾ ಸರ್ಕಾರ<br />ಸುಳ್ಳು ಹೇಳುತ್ತಾ ಬಂದಿದೆ. ಹಗರಣವನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು’ ಎಂದು ವೆಂಕಟೇಶ್ ಆಗ್ರಹಿಸಿದರು.</p>.<p>‘ಮೂರು ವರ್ಷಗಳಿಂದ ಸಿಐಡಿ ಮತ್ತು ಸಹಕಾರ ಇಲಾಖೆ ತನಿಖೆ ನಡೆಸಿ ಏನೆಲ್ಲ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಕಲೆಹಾಕಲಾಗಿದೆ. ಮುಂದಿನ ಹಂತದಲ್ಲಿ ಸಿಬಿಐಗೆ ನೀಡಲು ತಯಾರಾಗಿದ್ದೇವೆ. ಸಿಬಿಐ ಏನೆಲ್ಲಾ ದಾಖಲೆಗಳನ್ನು ಕೇಳಬಹುದೆಂಬ<br />ಎಂಬ ನಿರೀಕ್ಷೆಯಲ್ಲಿಯೇ ಎಲ್ಲ ಮಾಹಿತಿಗಳನ್ನು ಕಲೆಹಾಕಿದ್ದೇವೆ’ ಎಂದು ಸಚಿವರು ವಿವರಿಸಿದರು.</p>.<p>‘ಇಷ್ಟೆಲ್ಲ ತನಿಖೆ ಮಾಡಿದರೂ ವಂಚನೆ ಯಾರು ಮಾಡಿದ್ದಾರೆ ಎಂದು ಕಂಡುಹಿಡಿಯಲು ಆಗಿಲ್ಲ. ಇಡಿ ಅಧಿಕಾರಿಗಳೂ ವಿಚಾರಣೆ ಮಾಡಿದ್ದಾರೆ. ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನೂ ಪರಿಶೀಲಿಸಿದ್ದಾರೆ. ಗೃಹ ಇಲಾಖೆಗೆ<br />2–3 ದಿನಗಳಲ್ಲಿ ಕಡತ ರವಾನೆ ಆಗಲಿದೆ. ನಂತರ ಸಿಬಿಐಗೆ ಒಪ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು.</p>.<p>ಜೆಡಿಎಸ್ನ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದ ಐದು ಜಿಲ್ಲಾ ಸಹಕಾರ ಬ್ಯಾಂಕ್ಗಳಲ್ಲಿ ಸಾಲ ನೀಡುವ ವಿಷಯದಲ್ಲಿ ಕೇಳಿಬಂದಿದ್ದ ಆರೋಪಗಳ ಕುರಿತು ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಧಾರವಾಡ,<br />ವಿಜಯಪುರ, ಶಿವಮೊಗ್ಗ, ಕೋಲಾರ ಬ್ಯಾಂಕ್ಗಳಲ್ಲಿ ಆರೋಪ ಕೇಳಿಬಂದಿತ್ತು. ನಬಾರ್ಡ್ ನಿಯಮದ ಪ್ರಕಾರ ಸಾಲ ನೀಡಲಾಗಿದೆ. ಸಾಫ್ಟವೇರ್ ಬದಲಿಸಲಾಗಿದೆ. ಹೊಸ ವ್ಯವಸ್ಥೆಯಲ್ಲಿ ವಂಚನೆ ಮಾಡಲು ಸಾಧ್ಯವಿಲ್ಲ. ಆರೋಪ ಕೇಳಿಬಂದ ಕಾರಣ ಕೋಲಾರ ಬ್ಯಾಂಕಿನ<br />ವ್ಯವಸ್ಥಾಪಕರಿಗೆ ನೋಟಿಸ್ ನೀಡಲಾಗಿದೆ’ ಎಂದು ಹೇಳಿದರು.</p>.<p>‘ನೋಟಿಸ್ ನೀಡಿದರೆ ಸಾಲದು. ಅಕ್ರಮ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಶರವಣ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಹಗರಣವನ್ನು ಸಿಬಿಐಗೆ ವಹಿಸಲು ಎಲ್ಲ ರೀತಿಯ ತಯಾರಿ ನಡೆದಿದೆ. ಮುಖ್ಯಮಂತ್ರಿ ಜೊತೆ ಸಮಾಲೋಚಿಸಿ, ಗೃಹ ಇಲಾಖೆ ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.</p>.<p>ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿಐಡಿ, ಸಹಕಾರ ಇಲಾಖೆ ಮತ್ತು ಇಡಿ (ಜಾರಿ ನಿರ್ದೇಶನಾಲಯ) ಹಗರಣದ ತನಿಖೆ ನಡೆಸಿ, ₹ 1,290 ಕೋಟಿ ವಂಚನೆಯನ್ನು ಪತ್ತೆಹಚ್ಚಿವೆ. ಸಿಐಡಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸಿಬಿಐಗೆ ವಹಿಸಿದರೆ ತನಿಖೆ ವಿಳಂಬ ಆಗಬಹುದು ಎಂಬ ಕಾರಣಕ್ಕೆ ತಡೆಹಿಡಿಯಲಾಗಿತ್ತು’ ಎಂದು ವಿವರಿಸಿದರು.</p>.<p>‘ಬ್ಯಾಂಕಿನಿಂದ ಸಾಲ ಪಡೆದವರ ಆಸ್ತಿ ಜಪ್ತಿ ಮಾಡಲು ಸಾಧ್ಯವಿಲ್ಲ. ಏಕೆಂದರೆ, ಅಡಮಾನಕ್ಕಾಗಿ<br />ನೀಡಿರುವ ದಾಖಲೆಗಳು ಬೇರೆಯವರಿಗೆ ಸೇರಿವೆ. ಸಾಲ ವಸೂಲಿ ಮಾಡುತ್ತಿದ್ದೇವೆ, ಆಸ್ತಿ ಜಪ್ತಿ ಮಾಡುತ್ತೇವೆ ಎನ್ನುತ್ತಾ ಸರ್ಕಾರ<br />ಸುಳ್ಳು ಹೇಳುತ್ತಾ ಬಂದಿದೆ. ಹಗರಣವನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು’ ಎಂದು ವೆಂಕಟೇಶ್ ಆಗ್ರಹಿಸಿದರು.</p>.<p>‘ಮೂರು ವರ್ಷಗಳಿಂದ ಸಿಐಡಿ ಮತ್ತು ಸಹಕಾರ ಇಲಾಖೆ ತನಿಖೆ ನಡೆಸಿ ಏನೆಲ್ಲ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಕಲೆಹಾಕಲಾಗಿದೆ. ಮುಂದಿನ ಹಂತದಲ್ಲಿ ಸಿಬಿಐಗೆ ನೀಡಲು ತಯಾರಾಗಿದ್ದೇವೆ. ಸಿಬಿಐ ಏನೆಲ್ಲಾ ದಾಖಲೆಗಳನ್ನು ಕೇಳಬಹುದೆಂಬ<br />ಎಂಬ ನಿರೀಕ್ಷೆಯಲ್ಲಿಯೇ ಎಲ್ಲ ಮಾಹಿತಿಗಳನ್ನು ಕಲೆಹಾಕಿದ್ದೇವೆ’ ಎಂದು ಸಚಿವರು ವಿವರಿಸಿದರು.</p>.<p>‘ಇಷ್ಟೆಲ್ಲ ತನಿಖೆ ಮಾಡಿದರೂ ವಂಚನೆ ಯಾರು ಮಾಡಿದ್ದಾರೆ ಎಂದು ಕಂಡುಹಿಡಿಯಲು ಆಗಿಲ್ಲ. ಇಡಿ ಅಧಿಕಾರಿಗಳೂ ವಿಚಾರಣೆ ಮಾಡಿದ್ದಾರೆ. ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನೂ ಪರಿಶೀಲಿಸಿದ್ದಾರೆ. ಗೃಹ ಇಲಾಖೆಗೆ<br />2–3 ದಿನಗಳಲ್ಲಿ ಕಡತ ರವಾನೆ ಆಗಲಿದೆ. ನಂತರ ಸಿಬಿಐಗೆ ಒಪ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು.</p>.<p>ಜೆಡಿಎಸ್ನ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದ ಐದು ಜಿಲ್ಲಾ ಸಹಕಾರ ಬ್ಯಾಂಕ್ಗಳಲ್ಲಿ ಸಾಲ ನೀಡುವ ವಿಷಯದಲ್ಲಿ ಕೇಳಿಬಂದಿದ್ದ ಆರೋಪಗಳ ಕುರಿತು ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಧಾರವಾಡ,<br />ವಿಜಯಪುರ, ಶಿವಮೊಗ್ಗ, ಕೋಲಾರ ಬ್ಯಾಂಕ್ಗಳಲ್ಲಿ ಆರೋಪ ಕೇಳಿಬಂದಿತ್ತು. ನಬಾರ್ಡ್ ನಿಯಮದ ಪ್ರಕಾರ ಸಾಲ ನೀಡಲಾಗಿದೆ. ಸಾಫ್ಟವೇರ್ ಬದಲಿಸಲಾಗಿದೆ. ಹೊಸ ವ್ಯವಸ್ಥೆಯಲ್ಲಿ ವಂಚನೆ ಮಾಡಲು ಸಾಧ್ಯವಿಲ್ಲ. ಆರೋಪ ಕೇಳಿಬಂದ ಕಾರಣ ಕೋಲಾರ ಬ್ಯಾಂಕಿನ<br />ವ್ಯವಸ್ಥಾಪಕರಿಗೆ ನೋಟಿಸ್ ನೀಡಲಾಗಿದೆ’ ಎಂದು ಹೇಳಿದರು.</p>.<p>‘ನೋಟಿಸ್ ನೀಡಿದರೆ ಸಾಲದು. ಅಕ್ರಮ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಶರವಣ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>