<p><strong>ಬೆಂಗಳೂರು</strong>: ಜಯನಗರದ ವಿಜಯಾ ಕಾಲೇಜಿನ 80ನೇ ವಾರ್ಷಿಕೋತ್ಸವ, ಗುರುವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ-2025 ಸೋಮವಾರ ನೆರವೇರಿತು.</p>.<p>ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಧ್ಯಾಪಕರು ಮತ್ತು ಕಾಲೇಜಿನ ಅಭಿಮಾನಿಗಳನ್ನು ಒಂದುಗೂಡಿಸಿದ ಈ ಕಾರ್ಯಕ್ರಮ ಉತ್ಸವವಾಗಿದೆ’ ಎಂದರು.</p>.<p>ವಿಜಯಾ ವಾಣಿಜ್ಯ ಹಳೆಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ರಾಜಶೇಖರ್ ಅವರು, ಉಪನ್ಯಾಸಕರು ಹಾಗೂ ಕಾಲೇಜಿನ ದಿನಗಳನ್ನು ಸ್ಮರಿಸಿಕೊಂಡರು.</p>.<p>ಶಿಕ್ಷಣ ತಜ್ಞ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿ ಸದಸ್ಯರಾಗಿದ್ದ ಎಂ.ಕೆ. ಶ್ರೀಧರ್, ಸರ್ವಮಂಗಳ ಸ್ಮಾರಕ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕೆ.ಆರ್. ಸೋಮಶೇಖರ್, ನಟ- ಚಿತ್ರ ನಿರ್ದೇಶಕ ಸುಚೇಂದ್ರ ಪ್ರಸಾದ್, ಬಿ.ಎಚ್.ಎಸ್. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ. ಎ. ಬಾಲಕೃಷ್ಣ ಅಡಿಗ ಅವರನ್ನು ಸನ್ಮಾನಿಸಲಾಯಿತು. ಗುರುವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಅಂಗವಾಗಿ ನಿವೃತ್ತ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಯನಗರದ ವಿಜಯಾ ಕಾಲೇಜಿನ 80ನೇ ವಾರ್ಷಿಕೋತ್ಸವ, ಗುರುವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ-2025 ಸೋಮವಾರ ನೆರವೇರಿತು.</p>.<p>ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ‘ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಧ್ಯಾಪಕರು ಮತ್ತು ಕಾಲೇಜಿನ ಅಭಿಮಾನಿಗಳನ್ನು ಒಂದುಗೂಡಿಸಿದ ಈ ಕಾರ್ಯಕ್ರಮ ಉತ್ಸವವಾಗಿದೆ’ ಎಂದರು.</p>.<p>ವಿಜಯಾ ವಾಣಿಜ್ಯ ಹಳೆಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ರಾಜಶೇಖರ್ ಅವರು, ಉಪನ್ಯಾಸಕರು ಹಾಗೂ ಕಾಲೇಜಿನ ದಿನಗಳನ್ನು ಸ್ಮರಿಸಿಕೊಂಡರು.</p>.<p>ಶಿಕ್ಷಣ ತಜ್ಞ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿ ಸದಸ್ಯರಾಗಿದ್ದ ಎಂ.ಕೆ. ಶ್ರೀಧರ್, ಸರ್ವಮಂಗಳ ಸ್ಮಾರಕ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕೆ.ಆರ್. ಸೋಮಶೇಖರ್, ನಟ- ಚಿತ್ರ ನಿರ್ದೇಶಕ ಸುಚೇಂದ್ರ ಪ್ರಸಾದ್, ಬಿ.ಎಚ್.ಎಸ್. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ. ಎ. ಬಾಲಕೃಷ್ಣ ಅಡಿಗ ಅವರನ್ನು ಸನ್ಮಾನಿಸಲಾಯಿತು. ಗುರುವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಅಂಗವಾಗಿ ನಿವೃತ್ತ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>