<p><strong>ಬೆಂಗಳೂರು</strong>: ‘ಗುರುರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಲೆಕ್ಕಮರುಪರಿಶೀಲನೆ ನಡೆಯಬೇಕು. ಈ ಮೊದಲು ಲೆಕ್ಕಪರಿಶೋಧನೆ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯಲ್ಲಿ ಶುಕ್ರವಾರ ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆ ನಡೆಸಿದ ಅವರು, ‘ಗ್ರಾಹಕರಿಗೆ ಶೇ 14ರ ಬಡ್ಡಿದರದಲ್ಲಿ ಸಾಲ ನೀಡಬೇಕು. ಈ ಪ್ರಕರಣದಲ್ಲಿ ಶೇ 18ರಷ್ಟು ಬಡ್ಡಿ ಪಡೆಯುತ್ತಿದ್ದರೂ ಅಧಿಕಾರಿಗಳು ಗಮನಿಸಲಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಯಾವುದೇ ಕಾರಣಕ್ಕೂ ಹೂಡಿಕೆದಾರರು ಗಾಬರಿಯಾಗಬಾರದು. ಅವರೊಂದಿಗೆ ಸಹಕಾರ ಇಲಾಖೆ ಇದೆ ಎಂಬುದನ್ನು ಮನದಟ್ಟು ಮಾಡಬೇಕು. ಈ ಕುರಿತು ಸಭೆ ಮಾಡಿ, ಹೂಡಿಕೆದಾರರಿಗೆ ಸಲಹೆ ಸೂಚನೆ ನೀಡಬೇಕು. ಒಟ್ಟಿನಲ್ಲಿ ಬ್ಯಾಂಕ್ ಉಳಿಯಬೇಕು’ ಎಂದು ಅವರು ಹೇಳಿದರು.</p>.<p>‘ಬ್ಯಾಂಕ್ ಅಧ್ಯಕ್ಷರ ಮೇಲೆ ಎಫ್ಐಆರ್ ದಾಖಲಿಸಬೇಕು. ಎಷ್ಟು ವರ್ಷ ಅವಧಿಯ ಲೆಕ್ಕಮರುಪರಿಶೀಲನೆ (ರಿಆಡಿಟ್) ನಡೆಯಬೇಕು ಎಂಬುದನ್ನು ನಿರ್ಧರಿಸಿ ಶೀಘ್ರ ವರದಿ ನೀಡಬೇಕು’ ಎಂದು ಸಂಸದ ತೇಜಸ್ವಿ ಸೂರ್ಯ ಸೂಚಿಸಿದರು.</p>.<p>‘ಬ್ಯಾಂಕ್ನ ಸಿಇಒ, ಅಧ್ಯಕ್ಷ, ಉಪಾಧ್ಯಕ್ಷರು ಮಾತ್ರ ಅವ್ಯವಹಾರ ಮಾಡಿದ್ದಾರೆ. ಇವರೆಲ್ಲರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗುರುರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಲೆಕ್ಕಮರುಪರಿಶೀಲನೆ ನಡೆಯಬೇಕು. ಈ ಮೊದಲು ಲೆಕ್ಕಪರಿಶೋಧನೆ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯಲ್ಲಿ ಶುಕ್ರವಾರ ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆ ನಡೆಸಿದ ಅವರು, ‘ಗ್ರಾಹಕರಿಗೆ ಶೇ 14ರ ಬಡ್ಡಿದರದಲ್ಲಿ ಸಾಲ ನೀಡಬೇಕು. ಈ ಪ್ರಕರಣದಲ್ಲಿ ಶೇ 18ರಷ್ಟು ಬಡ್ಡಿ ಪಡೆಯುತ್ತಿದ್ದರೂ ಅಧಿಕಾರಿಗಳು ಗಮನಿಸಲಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಯಾವುದೇ ಕಾರಣಕ್ಕೂ ಹೂಡಿಕೆದಾರರು ಗಾಬರಿಯಾಗಬಾರದು. ಅವರೊಂದಿಗೆ ಸಹಕಾರ ಇಲಾಖೆ ಇದೆ ಎಂಬುದನ್ನು ಮನದಟ್ಟು ಮಾಡಬೇಕು. ಈ ಕುರಿತು ಸಭೆ ಮಾಡಿ, ಹೂಡಿಕೆದಾರರಿಗೆ ಸಲಹೆ ಸೂಚನೆ ನೀಡಬೇಕು. ಒಟ್ಟಿನಲ್ಲಿ ಬ್ಯಾಂಕ್ ಉಳಿಯಬೇಕು’ ಎಂದು ಅವರು ಹೇಳಿದರು.</p>.<p>‘ಬ್ಯಾಂಕ್ ಅಧ್ಯಕ್ಷರ ಮೇಲೆ ಎಫ್ಐಆರ್ ದಾಖಲಿಸಬೇಕು. ಎಷ್ಟು ವರ್ಷ ಅವಧಿಯ ಲೆಕ್ಕಮರುಪರಿಶೀಲನೆ (ರಿಆಡಿಟ್) ನಡೆಯಬೇಕು ಎಂಬುದನ್ನು ನಿರ್ಧರಿಸಿ ಶೀಘ್ರ ವರದಿ ನೀಡಬೇಕು’ ಎಂದು ಸಂಸದ ತೇಜಸ್ವಿ ಸೂರ್ಯ ಸೂಚಿಸಿದರು.</p>.<p>‘ಬ್ಯಾಂಕ್ನ ಸಿಇಒ, ಅಧ್ಯಕ್ಷ, ಉಪಾಧ್ಯಕ್ಷರು ಮಾತ್ರ ಅವ್ಯವಹಾರ ಮಾಡಿದ್ದಾರೆ. ಇವರೆಲ್ಲರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>