‘ವಿದೇಶದಲ್ಲಿ ಉನ್ನತ ವ್ಯಾಸಂಗ, ಉನ್ನತ ಹುದ್ದೆಗಳು, ಅಗಣಿತ ಗೌರವಗಳು ಅರಿಸಿ ಬಂದರೂ ನರಸಿಂಹಯ್ಯ ಅವರು ಬದುಕಿನುದ್ದಕ್ಕೂ ಆಡಂಬರ ತೋರಲಿಲ್ಲ. ಗಾಂಧಿ ಮಾರ್ಗದ ಸರಳ ಬದುಕು ಮೈಗೂಡಿಸಿಕೊಂಡ ಅವರು, ಇಡೀ ಜೀವನವನ್ನು ಶಿಕ್ಷಣಕ್ಕಾಗಿ ಮೀಸಲಿಡುವ ಮೂಲಕ ಸಂತರ ರೀತಿಯಲ್ಲಿ ಬದುಕಿದರು. ವಿಜ್ಞಾನ ಮತ್ತು ವೈಜ್ಞಾನಿಕ ವಿಧಾನದಲ್ಲಿ ಧೃಢವಾದ ನಂಬಿಕೆಯನ್ನು ಹೊಂದಿದ್ದ ಅವರು, ಮೌಢ್ಯದ ವಿರುದ್ಧ ಸತತ ಹೋರಾಡಿದರು. ಅವರ ಜೀವನ ಎಲ್ಲರಿಗೂ ಆದರ್ಶಪ್ರಾಯವಾಗಿದ್ದು, ಅವರು ಪ್ರತಿಪಾದಿಸಿದ ಸರಳ ಜೀವನ ಹಾಗೂ ನಿಸ್ವಾರ್ಥ ಬದುಕಿನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.