ಬೆಂಗಳೂರು: ರಾಜ್ಯದಲ್ಲಿ ಎಚ್1ಎನ್1 ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆಕೊನೆಯುಸಿರೆಳೆದಿದ್ದಾರೆ.
ಕಳೆದ ವರ್ಷ ಈ ಸೋಂಕಿಗೆ 96 ಮಂದಿ ಮೃತಪಟ್ಟಿದ್ದರು. ಇದೀಗ ವರ್ಷಾರಂಭದಲ್ಲಿಯೇ ಈ ಸೋಂಕು ಬಲಿ ತೆಗೆದುಕೊಳ್ಳಲಾರಂಭಿಸಿದೆ.
ಎರಡು ದಿನಗಳ ಹಿಂದಷ್ಟೇತುಮಕೂರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿತ್ತು.
ರಾಜ್ಯದಲ್ಲಿ 2,011 ಶಂಕಿತರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಅದರಲ್ಲಿ 208 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ಭೀತಿಯ ನಡುವೆಯೇ ಈ ಸೋಂಕಿಗೆ ಒಳಪಡುವವರ ಸಂಖ್ಯೆ ಹೆಚ್ಚುತ್ತಿದೆ.