ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಆರೋಪ: ಹ್ಯಾಕರ್ ಶ್ರೀಕೃಷ್ಣ ಬಂಧನ

Last Updated 6 ನವೆಂಬರ್ 2021, 21:37 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹೋಟೆಲೊಂದರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು (26) ಜೀವನ್‌ ಭಿಮಾ ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

‘ಶ್ರೀಕೃಷ್ಣ ಹಾಗೂ ಆತನ ಸ್ನೇಹಿತ ವಿಷ್ಣು ಭಟ್, ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಈ ಪ್ರಕರಣದಲ್ಲಿ ಇಬ್ಬರನ್ನೂ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರೊಬ್ಬರು ತಿಳಿಸಿದರು.

‘ಆರಂಭದಲ್ಲಿ ಶ್ರೀಕೃಷ್ಣನ ಹೆಸರು ಹಾಗೂ ಆತ ಯಾರು? ಎಂಬುದು ತಿಳಿದಿರಲಿಲ್ಲ. ವಿಚಾರಿಸಿದಾಗ ಅಂತರ
ರಾಷ್ಟ್ರೀಯ ಹ್ಯಾಕರ್ ಎಂಬುದು ತಿಳಿಯಿತು. ಆತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವ ಮಾಹಿತಿಯೂ ಲಭ್ಯವಾಯಿತು’ ಎಂದೂ ತಿಳಿಸಿದರು.

‘ತನ್ನ ವಿರುದ್ಧದ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದ ಶ್ರೀಕೃಷ್ಣ, ಸ್ನೇಹಿತರ ಜೊತೆ ಸುತ್ತಾಡುತ್ತಿದ್ದ. ಐಷಾರಾಮಿ ಹೋಟೆಲ್‌ಗಳ ಕೊಠಡಿಗಳಲ್ಲಿ ಉಳಿದುಕೊಳ್ಳುತ್ತಿದ್ದ’ ಎಂದೂ ಹೇಳಿದರು.

ಆರೋಪಿಗಳು ವಾಸವಿದ್ದ ಕೊಠಡಿಯಲ್ಲಿ ಮಾದಕ ವಸ್ತುಗಳು ಇರುವ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ಪರಿಶೀಲಿ
ಸುತ್ತಿದ್ದಾರೆ. ‘ಶ್ರೀಕೃಷ್ಣ ವಾಸವಿದ್ದ ಕೊಠಡಿಯಲ್ಲಿ ಕೆಲ ವಸ್ತುಗಳು ಸಿಕ್ಕಿದ್ದು, ತನಿಖೆ ಮುಂದುವರಿದಿದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT