<p><strong>ಕೆಂಗೇರಿ:</strong> ದೇಶದ ಸಾಮಾಜಿಕ ಬದಲಾವಣೆಯಲ್ಲಿ ಹಡಪದ ಅಪ್ಪಣ್ಣ ಅವರ ಕೊಡುಗೆ ಅನನ್ಯವಾದುದು ಎಂದು ಅಖಿಲ ಕರ್ನಾಟಕ ಕನ್ನಡ ಸವಿತಾ ಮಹಾಮಂಡಲ ತಲಘಟ್ಟಪುರ ಶಾಖಾ ಅಧ್ಯಕ್ಷ ರಮೇಶ್ .ಪಿ ಹೇಳಿದರು.</p>.<p>ಅಖಿಲ ಕರ್ನಾಟಕ ಕನ್ನಡ ಸವಿತಾ ಮಹಾಮಂಡಲದ ವತಿಯಿಂದ ಹೆಮ್ಮಿಗೆಪುರ ವಾರ್ಡಿನ ವಾಜರಹಳ್ಳಿಯಲ್ಲಿ ಆಯೋಜಿಸಿದ್ದ ಶ್ರೀಶಿವಶರಣ ಹಡಪದ ಅಪ್ಪಣ್ಣ ಅವರ 889ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>12ನೇ ಶತಮಾನದಲ್ಲಿ ನಡೆದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯಲ್ಲಿ ಹಡಪದ ಅಪ್ಪಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು. 250ಕ್ಕೂ ಹೆಚ್ಚು ವಚನ ರಚಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸಿದ್ದರು ಎಂದು ಹೇಳಿದರು.</p>.<p>ಕರ್ನಾಟಕ ಕನ್ನಡ ಸವಿತಾ ಮಹಾಮಂಡಲದ ರಾಜ್ಯಾಧ್ಯಕ್ಷ ಟಿ.ವೆಂಕಟೇಶ್ ಮಾತನಾಡಿ, ಬಸವಣ್ಣ ಸಾಮಾಜಿಕ ಕ್ರಾಂತಿಗೆ ಮುಂದಾದಾಗ ಎಲ್ಲಾ ಕಾಯಕ ವರ್ಗದವರೂ ಬೆಂಬಲ ನೀಡಿದ್ದರು. ಈ ವೇಳೆ ಹಡಪದ ಅಪ್ಪಣ್ಣ ಬಸವಣ್ಣ ಅವರ ಕಾರ್ಯದರ್ಶಿಯಂತೆ ಮುಂದಾಳತ್ವ ವಹಿಸಿ ಸಮಾಜದ ಓರೆ ಕೋರೆಗಳನ್ನು ತಿದ್ದುವ ಮಹತ್ಕಾರ್ಯದಲ್ಲಿ ತೊಡಗಿದ್ದರು ಎಂದರು. </p>.<p>ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ಅಖಿಲ ಕರ್ನಾಟಕ ಕನ್ನಡ ಸವಿತಾ ಮಹಾಮಂಡಲವು ಹಲವು ವರ್ಷಗಳಿಂದ ಸಮಾಜದ ಏಳಿಗೆಗೆ ಶ್ರಮಿಸುತ್ತಿದೆ. ಸಂಘದ ಆಶೋತ್ತರಗಳಿಗೆ ಪೂರಕವಾಗಿ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಬಿಬಿಎಂಪಿ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ , ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಕುಸುಮಾ ಶಿವಮಾದಯ್ಯ . ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಮೃತ್ ಗೌಡ, ವಾರ್ಡ್ ಅಧ್ಯಕ್ಷ ಪ್ರಕಾಶ್, ಸೌಮ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ದೇಶದ ಸಾಮಾಜಿಕ ಬದಲಾವಣೆಯಲ್ಲಿ ಹಡಪದ ಅಪ್ಪಣ್ಣ ಅವರ ಕೊಡುಗೆ ಅನನ್ಯವಾದುದು ಎಂದು ಅಖಿಲ ಕರ್ನಾಟಕ ಕನ್ನಡ ಸವಿತಾ ಮಹಾಮಂಡಲ ತಲಘಟ್ಟಪುರ ಶಾಖಾ ಅಧ್ಯಕ್ಷ ರಮೇಶ್ .ಪಿ ಹೇಳಿದರು.</p>.<p>ಅಖಿಲ ಕರ್ನಾಟಕ ಕನ್ನಡ ಸವಿತಾ ಮಹಾಮಂಡಲದ ವತಿಯಿಂದ ಹೆಮ್ಮಿಗೆಪುರ ವಾರ್ಡಿನ ವಾಜರಹಳ್ಳಿಯಲ್ಲಿ ಆಯೋಜಿಸಿದ್ದ ಶ್ರೀಶಿವಶರಣ ಹಡಪದ ಅಪ್ಪಣ್ಣ ಅವರ 889ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>12ನೇ ಶತಮಾನದಲ್ಲಿ ನಡೆದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯಲ್ಲಿ ಹಡಪದ ಅಪ್ಪಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು. 250ಕ್ಕೂ ಹೆಚ್ಚು ವಚನ ರಚಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಶ್ರಮಿಸಿದ್ದರು ಎಂದು ಹೇಳಿದರು.</p>.<p>ಕರ್ನಾಟಕ ಕನ್ನಡ ಸವಿತಾ ಮಹಾಮಂಡಲದ ರಾಜ್ಯಾಧ್ಯಕ್ಷ ಟಿ.ವೆಂಕಟೇಶ್ ಮಾತನಾಡಿ, ಬಸವಣ್ಣ ಸಾಮಾಜಿಕ ಕ್ರಾಂತಿಗೆ ಮುಂದಾದಾಗ ಎಲ್ಲಾ ಕಾಯಕ ವರ್ಗದವರೂ ಬೆಂಬಲ ನೀಡಿದ್ದರು. ಈ ವೇಳೆ ಹಡಪದ ಅಪ್ಪಣ್ಣ ಬಸವಣ್ಣ ಅವರ ಕಾರ್ಯದರ್ಶಿಯಂತೆ ಮುಂದಾಳತ್ವ ವಹಿಸಿ ಸಮಾಜದ ಓರೆ ಕೋರೆಗಳನ್ನು ತಿದ್ದುವ ಮಹತ್ಕಾರ್ಯದಲ್ಲಿ ತೊಡಗಿದ್ದರು ಎಂದರು. </p>.<p>ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ಅಖಿಲ ಕರ್ನಾಟಕ ಕನ್ನಡ ಸವಿತಾ ಮಹಾಮಂಡಲವು ಹಲವು ವರ್ಷಗಳಿಂದ ಸಮಾಜದ ಏಳಿಗೆಗೆ ಶ್ರಮಿಸುತ್ತಿದೆ. ಸಂಘದ ಆಶೋತ್ತರಗಳಿಗೆ ಪೂರಕವಾಗಿ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಬಿಬಿಎಂಪಿ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ , ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಕುಸುಮಾ ಶಿವಮಾದಯ್ಯ . ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಮೃತ್ ಗೌಡ, ವಾರ್ಡ್ ಅಧ್ಯಕ್ಷ ಪ್ರಕಾಶ್, ಸೌಮ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>