<p><strong>ಬೆಂಗಳೂರು: </strong>ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ರಮೇಶ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ದೂರು ನೀಡಿದರೂ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಸಂಬಂಧಿಕರು ಆರೋಪಿಸಿದ್ದಾರೆ.</p>.<p>ನಗರ ಪೊಲೀಸ್ ಕಮಿಷನರ್ ಕಚೇರಿಗೆ ಬಂದಿದ್ದ ಸಂಬಂಧಿಕರು, ‘ಹಲ್ಲೆಯಿಂದಾಗಿ ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದರು.</p>.<p>‘ಯಲಹಂಕ ಬಳಿಯ ಬಾಗಲೂರು ಕ್ರಾಸ್ನಲ್ಲಿ ರಾಜಸ್ಥಾನದ ರಮೇಶ್ ಅಂಗಡಿ ಇಟ್ಟುಕೊಂಡು<br />ಜೀವನ ಮಾಡುತ್ತಿದ್ದಾರೆ. ಬುಧವಾರ ಅಂಗಡಿ ಬಳಿ ಬಂದಿದ್ದ ದುಷ್ಕರ್ಮಿಗಳು, ಹಫ್ತಾ ನೀಡುವಂತೆ ಒತ್ತಾಯಿಸಿದ್ದರು. ಹಣ ನೀಡಲು ರಮೇಶ್ ನಿರಾಕರಿಸಿದ್ದರು.’</p>.<p>‘ಹಫ್ತಾ ನೀಡಲಿಲ್ಲವೆಂದು ಸಿಟ್ಟಾಗಿದ್ದ ದುಷ್ಕರ್ಮಿಗಳು, ಆಟೊದಲ್ಲಿ ಬಂದು ರಮೇಶ್ ಮೇಲೆ ದಾಳಿ ಮಾಡಿದ್ದರು. ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ಬಗ್ಗೆ ಯಲಹಂಕ ಠಾಣೆಗೆ ದೂರು ನೀಡ<br />ಲಾಗಿದ್ದು, ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ’ ಎಂದೂ ದೂರಿದರು.</p>.<p>ಸಂಬಂಧಿಕರ ಜೊತೆ ಸ್ಥಳೀಯ ವ್ಯಾಪಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ರಮೇಶ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ದೂರು ನೀಡಿದರೂ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಸಂಬಂಧಿಕರು ಆರೋಪಿಸಿದ್ದಾರೆ.</p>.<p>ನಗರ ಪೊಲೀಸ್ ಕಮಿಷನರ್ ಕಚೇರಿಗೆ ಬಂದಿದ್ದ ಸಂಬಂಧಿಕರು, ‘ಹಲ್ಲೆಯಿಂದಾಗಿ ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಮನವಿ ಮಾಡಿದರು.</p>.<p>‘ಯಲಹಂಕ ಬಳಿಯ ಬಾಗಲೂರು ಕ್ರಾಸ್ನಲ್ಲಿ ರಾಜಸ್ಥಾನದ ರಮೇಶ್ ಅಂಗಡಿ ಇಟ್ಟುಕೊಂಡು<br />ಜೀವನ ಮಾಡುತ್ತಿದ್ದಾರೆ. ಬುಧವಾರ ಅಂಗಡಿ ಬಳಿ ಬಂದಿದ್ದ ದುಷ್ಕರ್ಮಿಗಳು, ಹಫ್ತಾ ನೀಡುವಂತೆ ಒತ್ತಾಯಿಸಿದ್ದರು. ಹಣ ನೀಡಲು ರಮೇಶ್ ನಿರಾಕರಿಸಿದ್ದರು.’</p>.<p>‘ಹಫ್ತಾ ನೀಡಲಿಲ್ಲವೆಂದು ಸಿಟ್ಟಾಗಿದ್ದ ದುಷ್ಕರ್ಮಿಗಳು, ಆಟೊದಲ್ಲಿ ಬಂದು ರಮೇಶ್ ಮೇಲೆ ದಾಳಿ ಮಾಡಿದ್ದರು. ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ಬಗ್ಗೆ ಯಲಹಂಕ ಠಾಣೆಗೆ ದೂರು ನೀಡ<br />ಲಾಗಿದ್ದು, ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ’ ಎಂದೂ ದೂರಿದರು.</p>.<p>ಸಂಬಂಧಿಕರ ಜೊತೆ ಸ್ಥಳೀಯ ವ್ಯಾಪಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>