ಬೆಂಗಳೂರು: ಎಚ್ಎಎಲ್ ಠಾಣೆ ವ್ಯಾಪ್ತಿಯಲ್ಲಿ 2019ರ ಮೇ ತಿಂಗಳಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಕೆ.ರಘುನಾಥ್ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ‘ಇದು ಆತ್ಮಹತ್ಯೆಯಲ್ಲ, ಕೊಲೆ’ ಎಂಬ ಆರೋಪದಡಿ ಉದ್ಯಮಿ, ದಿವಂಗತ ಡಿ.ಕೆ.ಆದಿಕೇಶವಲು ಪುತ್ರ ಶ್ರೀನಿವಾಸ್ ಸೇರಿ ನಾಲ್ವರವಿರುದ್ಧ ಎಫ್ಐಆರ್ ದಾಖಲಾಗಿದೆ.