<p><strong>ಬೆಂಗಳೂರು</strong>: ಎಚ್ಎಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ತಿಕ್ ನಗರ ಜಂಕ್ಷನ್ನಿಂದ ಕಲಾಮಂದಿರದವರೆಗೆ ಹೊರ ವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆ ನಿಯಂತ್ರಿಸಲು ಕೆಲ ಮಾರ್ಪಾಡು ಮಾಡಲಾಗಿದೆ.</p>.<p>ಜೀವಿಕಾ ಆಸ್ಪತ್ರೆ ಸಮೀಪ ಮಾರತ್ತಹಳ್ಳಿ ಕಡೆಯ ಸರ್ವೀಸ್ ರಸ್ತೆಯಲ್ಲಿ ಕಲಾಮಂದಿರದ ಕಡೆಯಿಂದ ಹೊರ ವರ್ತುಲ ರಸ್ತೆಗೆ ಪ್ರವೇಶಿಸುವ ಹಾಗೂ ಯಮಹಾ ಶೋ ರೂಂ ಬಳಿ ಹೊರ ವರ್ತುಲ ರಸ್ತೆಯಿಂದ ಸರ್ವೀಸ್ ರಸ್ತೆ ಪ್ರವೇಶಿಸುವ ಮಾರ್ಗ ನಿರ್ಬಂಧಿಸಲಾಗಿದೆ.</p>.<p>ಪರ್ಯಾಯ ಮಾರ್ಗ: ಚಿನ್ನಪ್ಪನಹಳ್ಳಿ ರೈಲ್ವೆ ಗೇಟ್ ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ಜೀವಿಕಾ ಆಸ್ಪತ್ರೆಯ ಸರ್ವೀಸ್ ರಸ್ತೆ ಮೂಲಕ ಸಂಚರಿಸಿ, ಕಡ್ಡಾಯವಾಗಿ ಯಮಹಾ ಶೋ ರೂಂ ಬಳಿ ಹೊರ ವರ್ತುಲ ರಸ್ತೆ ಪ್ರವೇಶಿಸಬೇಕು.</p>.<p>ಮಹದೇವಪುರ ಮತ್ತು ಕಾರ್ತಿಕ್ ನಗರ ಹೊರ ವರ್ತುಲ ರಸ್ತೆ ಕಡೆಯಿಂದ ವೈಟ್ಫೀಲ್ಡ್, ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್ನಲ್ಲಿ ಸರ್ವೀಸ್ ರಸ್ತೆಯನ್ನು ಪ್ರವೇಶಿಸಿ, ಕುಂದಲಹಳ್ಳಿ, ವರ್ತೂರು ಕಡೆಗೆ ಸಂಚರಿಸಬಹುದು ಎಂದು ಪೂರ್ವ ಸಂಚಾರ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಚ್ಎಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ತಿಕ್ ನಗರ ಜಂಕ್ಷನ್ನಿಂದ ಕಲಾಮಂದಿರದವರೆಗೆ ಹೊರ ವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆ ನಿಯಂತ್ರಿಸಲು ಕೆಲ ಮಾರ್ಪಾಡು ಮಾಡಲಾಗಿದೆ.</p>.<p>ಜೀವಿಕಾ ಆಸ್ಪತ್ರೆ ಸಮೀಪ ಮಾರತ್ತಹಳ್ಳಿ ಕಡೆಯ ಸರ್ವೀಸ್ ರಸ್ತೆಯಲ್ಲಿ ಕಲಾಮಂದಿರದ ಕಡೆಯಿಂದ ಹೊರ ವರ್ತುಲ ರಸ್ತೆಗೆ ಪ್ರವೇಶಿಸುವ ಹಾಗೂ ಯಮಹಾ ಶೋ ರೂಂ ಬಳಿ ಹೊರ ವರ್ತುಲ ರಸ್ತೆಯಿಂದ ಸರ್ವೀಸ್ ರಸ್ತೆ ಪ್ರವೇಶಿಸುವ ಮಾರ್ಗ ನಿರ್ಬಂಧಿಸಲಾಗಿದೆ.</p>.<p>ಪರ್ಯಾಯ ಮಾರ್ಗ: ಚಿನ್ನಪ್ಪನಹಳ್ಳಿ ರೈಲ್ವೆ ಗೇಟ್ ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ಜೀವಿಕಾ ಆಸ್ಪತ್ರೆಯ ಸರ್ವೀಸ್ ರಸ್ತೆ ಮೂಲಕ ಸಂಚರಿಸಿ, ಕಡ್ಡಾಯವಾಗಿ ಯಮಹಾ ಶೋ ರೂಂ ಬಳಿ ಹೊರ ವರ್ತುಲ ರಸ್ತೆ ಪ್ರವೇಶಿಸಬೇಕು.</p>.<p>ಮಹದೇವಪುರ ಮತ್ತು ಕಾರ್ತಿಕ್ ನಗರ ಹೊರ ವರ್ತುಲ ರಸ್ತೆ ಕಡೆಯಿಂದ ವೈಟ್ಫೀಲ್ಡ್, ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್ನಲ್ಲಿ ಸರ್ವೀಸ್ ರಸ್ತೆಯನ್ನು ಪ್ರವೇಶಿಸಿ, ಕುಂದಲಹಳ್ಳಿ, ವರ್ತೂರು ಕಡೆಗೆ ಸಂಚರಿಸಬಹುದು ಎಂದು ಪೂರ್ವ ಸಂಚಾರ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>