‘ದೇಶದ ಎಲ್ಲ ಕೋಮಿನ ಜನರಿಗೆ ವ್ಯಾಪಾರ, ವಹಿವಾಟು ನಡೆಸಲು ಸಂವಿಧಾನ ಸ್ವಾತಂತ್ರ್ಯ ನೀಡಿದೆ. ಆದರೆ, ನಗರದ ಹಲವೆಡೆ ಹಲಾಲ್ ಹೆಸರಿನಲ್ಲಿ ವ್ಯಾಪಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಕೆಲ ಸಂಘಟನೆಗಳ ಹೆಸರಿನಲ್ಲಿ ಸುತ್ತಾಡುತ್ತಿರುವ ಪುನೀತ್ ಕೆರೆಹಳ್ಳಿ, ಪ್ರಶಾಂತ್ ಸಂಬರಗಿ ಹಾಗೂ ಇತರರು, ವ್ಯಾಪಾರಿಗಳಿಗೆ ಬೆದರಿಕೆಯೊಡ್ಡುತ್ತಿದ್ದಾರೆ. ಕರಪತ್ರಗಳನ್ನು ಹಂಚಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.