<p><strong>ಬೆಂಗಳೂರು:</strong> ಆಟೊ ಚಾಲಕರನ್ನು ಗುರಿಯಾಗಿಸಿ ಡಕಾಯಿತಿ ನಡೆಸುತ್ತಿದ್ದ ನಾಲ್ವರನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಹಲಸೂರಿನ ಎಂ.ವಿ ಗಾರ್ಡನ್ ನಿವಾಸಿಗಳಾದ ಚರಣ್(21), ರಾಜೇಶ್ ಅಲಿಯಾಸ್ ಇಡ್ಲಿ(20), ವಿಷ್ಣು(20) ಸೇರಿ ನಾಲ್ವರನ್ನು ಬಂಧಿಸಲಾಗಿದೆ.</p>.<p>ಮಾರ್ಚ್ 1ರಂದು ಹಲಸೂರು ಹಳೆ ಮದ್ರಾಸ್ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಬಳಿ ಇಬ್ಬರು ಆಟೊ ಚಾಲಕರನ್ನು ದರೋಡೆ ಮಾಡಿ ಹಣ, ಮೊಬೈಲ್, ಬೆಳ್ಳಿ ಸರವನ್ನು ಸುಲಿಗೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.</p>.<p><strong>ಐಷಾರಾಮಿ ಜೀವನ:</strong> ಕೆಲವು ತಿಂಗಳಿಂದ ವಾಹನ ಸವಾರರ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು ಎಂಬುದು ಆರೋಪಿಗಳ ವಿಚಾರಣೆಯಿಂದ ಗೊತ್ತಾಗಿದೆ. ಮಾದಕ ವಸ್ತು ಸೇವನೆ, ಮೋಜು–ಮಸ್ತಿಗಾಗಿ ಕೃತ್ಯ ಎಸಗುತ್ತಿದ್ದಾರೆ ಎಂದು ಪೊಲೀಸರು ಹೇಳಿದರು. ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಟೊ ಚಾಲಕರನ್ನು ಗುರಿಯಾಗಿಸಿ ಡಕಾಯಿತಿ ನಡೆಸುತ್ತಿದ್ದ ನಾಲ್ವರನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಹಲಸೂರಿನ ಎಂ.ವಿ ಗಾರ್ಡನ್ ನಿವಾಸಿಗಳಾದ ಚರಣ್(21), ರಾಜೇಶ್ ಅಲಿಯಾಸ್ ಇಡ್ಲಿ(20), ವಿಷ್ಣು(20) ಸೇರಿ ನಾಲ್ವರನ್ನು ಬಂಧಿಸಲಾಗಿದೆ.</p>.<p>ಮಾರ್ಚ್ 1ರಂದು ಹಲಸೂರು ಹಳೆ ಮದ್ರಾಸ್ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಬಳಿ ಇಬ್ಬರು ಆಟೊ ಚಾಲಕರನ್ನು ದರೋಡೆ ಮಾಡಿ ಹಣ, ಮೊಬೈಲ್, ಬೆಳ್ಳಿ ಸರವನ್ನು ಸುಲಿಗೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.</p>.<p><strong>ಐಷಾರಾಮಿ ಜೀವನ:</strong> ಕೆಲವು ತಿಂಗಳಿಂದ ವಾಹನ ಸವಾರರ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು ಎಂಬುದು ಆರೋಪಿಗಳ ವಿಚಾರಣೆಯಿಂದ ಗೊತ್ತಾಗಿದೆ. ಮಾದಕ ವಸ್ತು ಸೇವನೆ, ಮೋಜು–ಮಸ್ತಿಗಾಗಿ ಕೃತ್ಯ ಎಸಗುತ್ತಿದ್ದಾರೆ ಎಂದು ಪೊಲೀಸರು ಹೇಳಿದರು. ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>