<p><strong>ಬೆಂಗಳೂರು: </strong>‘ಕಬ್ಬಿನ ಎಫ್ಆರ್ಪಿ ದರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸುತ್ತಿರುವ ರೈತರು, ಉದ್ಯಾನ ಎದುರಿನ ಮುಖ್ಯರಸ್ತೆಯಲ್ಲಿ ಗುರುವಾರ ಅರೆಬೆತ್ತಲೆ ಉರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅನಿರ್ದಿಷ್ಟ ಪ್ರತಿಭಟನೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ಸರದಿ ಪ್ರಕಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ರೈತರು, ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸುತ್ತಿದ್ದಾರೆ.</p>.<p>ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದರು. ಆದರೆ, ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಹೀಗಾಗಿ, ಉದ್ಯಾನದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.</p>.<p>ರೈತರ ಬೇಡಿಕೆ ಈಡೇರಿಸುವ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಆರೋಪಿಸಿದ ರೈತರು, ಅಂಗಿಗಳನ್ನು ಬಿಚ್ಚಿ ಅರೆಬೆತ್ತಲಾಗಿ ಗುರುವಾರ ಮಧ್ಯಾಹ್ನ ರಸ್ತೆಗೆ ಇಳಿದು ಉರುಳು ಸೇವೆ ಮಾಡಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಸ್ಥಳದಲ್ಲಿದ್ದ ಪೊಲೀಸರು, ರೈತರನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಮುಖ್ಯಮಂತ್ರಿ ಮನೆಗೆ ಹೋಗಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದಂತೆ ಬಿಎಂಟಿಸಿ ಬಸ್ಗಳನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಪೊಲೀಸರು, ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಮಾತಿನ ಚಕಮಕಿಯೂ ನಡೆಯಿತು.</p>.<p>ರೈತರನ್ನು ಸಮಾಧಾನಪಡಿಸಿದ ಪೊಲೀಸ್ ಅಧಿಕಾರಿಗಳು, ವಶಕ್ಕೆ ಪಡೆಯುವುದನ್ನು ಕೈಬಿಟ್ಟು ವಾಪಸ್ ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ, ಉದ್ಯಾನದಲ್ಲಿರುವ ಪೆಂಡಾಲ್ನಲ್ಲಿ ರೈತರು ಪ್ರತಿಭಟನೆ ಮುಂದುವರೆಸಿದರು.</p>.<p>‘ಎಫ್ಆರ್ಪಿ ದರ ಹೆಚ್ಚಿಸಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ದರ ಹೆಚ್ಚಳ ಬೇಡಿಕೆ ಈಡೇರಿಸುವವರೆಗೂ ಉದ್ಯಾನ ಬಿಟ್ಟು ಹೋಗುವುದಿಲ್ಲ’ ಎಂದು ಪ್ರತಿಭಟನಾನಿರತರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕಬ್ಬಿನ ಎಫ್ಆರ್ಪಿ ದರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸುತ್ತಿರುವ ರೈತರು, ಉದ್ಯಾನ ಎದುರಿನ ಮುಖ್ಯರಸ್ತೆಯಲ್ಲಿ ಗುರುವಾರ ಅರೆಬೆತ್ತಲೆ ಉರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.</p>.<p>ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅನಿರ್ದಿಷ್ಟ ಪ್ರತಿಭಟನೆ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ಸರದಿ ಪ್ರಕಾರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ರೈತರು, ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸುತ್ತಿದ್ದಾರೆ.</p>.<p>ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದರು. ಆದರೆ, ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಹೀಗಾಗಿ, ಉದ್ಯಾನದಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.</p>.<p>ರೈತರ ಬೇಡಿಕೆ ಈಡೇರಿಸುವ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಆರೋಪಿಸಿದ ರೈತರು, ಅಂಗಿಗಳನ್ನು ಬಿಚ್ಚಿ ಅರೆಬೆತ್ತಲಾಗಿ ಗುರುವಾರ ಮಧ್ಯಾಹ್ನ ರಸ್ತೆಗೆ ಇಳಿದು ಉರುಳು ಸೇವೆ ಮಾಡಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಸ್ಥಳದಲ್ಲಿದ್ದ ಪೊಲೀಸರು, ರೈತರನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಮುಖ್ಯಮಂತ್ರಿ ಮನೆಗೆ ಹೋಗಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದಂತೆ ಬಿಎಂಟಿಸಿ ಬಸ್ಗಳನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಪೊಲೀಸರು, ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಮಾತಿನ ಚಕಮಕಿಯೂ ನಡೆಯಿತು.</p>.<p>ರೈತರನ್ನು ಸಮಾಧಾನಪಡಿಸಿದ ಪೊಲೀಸ್ ಅಧಿಕಾರಿಗಳು, ವಶಕ್ಕೆ ಪಡೆಯುವುದನ್ನು ಕೈಬಿಟ್ಟು ವಾಪಸ್ ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ, ಉದ್ಯಾನದಲ್ಲಿರುವ ಪೆಂಡಾಲ್ನಲ್ಲಿ ರೈತರು ಪ್ರತಿಭಟನೆ ಮುಂದುವರೆಸಿದರು.</p>.<p>‘ಎಫ್ಆರ್ಪಿ ದರ ಹೆಚ್ಚಿಸಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ದರ ಹೆಚ್ಚಳ ಬೇಡಿಕೆ ಈಡೇರಿಸುವವರೆಗೂ ಉದ್ಯಾನ ಬಿಟ್ಟು ಹೋಗುವುದಿಲ್ಲ’ ಎಂದು ಪ್ರತಿಭಟನಾನಿರತರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>