<p><strong>ಬೆಂಗಳೂರು: </strong>ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ಗ್ರಾಹಕರಿಂದ ಒನ್ ಟೈಂ ಪಾಸ್ವರ್ಡ್ (ಒಟಿಪಿ) ಪಡೆದು ವಂಚಿಸಿದ್ದ ಆರೋಪದಡಿ ಶಿವಪ್ರಸಾದ್ ಮಾಡಗಿ (30) ಎಂಬಾತನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬೀದರ್ ನಿವಾಸಿಯಾದ ಶಿವಪ್ರಸಾದ್ನ ಕೃತ್ಯದ ವಿರುದ್ಧ ವಕೀಲರೊಬ್ಬರು ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತ ಹಲವರಿಗೆ ವಂಚನೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಕೀಲರಿಗೆ ಕರೆ ಮಾಡಿದ್ದ ಆರೋಪಿ, ತಾನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದ. ಕ್ರೆಡಿಟ್ ಕಾರ್ಡ್ ಅವಧಿ ಮುಕ್ತಾಯವಾಗಿದ್ದು, ಅದನ್ನು ನವೀಕರಣ ಮಾಡಬೇಕೆಂದು ತಿಳಿಸಿದ್ದ. ಅದೇ ನೆಪದಲ್ಲಿ ಕಾರ್ಡ್ ಮಾಹಿತಿ ಸಹ ಪಡೆದುಕೊಂಡಿದ್ದ.’</p>.<p>‘ಮಾಹಿತಿ ಬಳಸಿಕೊಂಡು ಹಣ ವರ್ಗಾವಣೆ ಮಾಡಿಕೊಳ್ಳಲು ಮುಂದಾಗಿದ್ದ ಆರೋಪಿ, ಪುನಃ ವಕೀಲರಿಂದ ಐದು ಬಾರಿ ಒಟಿಪಿ ಪಡೆದುಕೊಂಡಿದ್ದ. ನಂತರ, ಅವರ ಖಾತೆಯಲ್ಲಿದ್ದ ₹97,998 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ಗ್ರಾಹಕರಿಂದ ಒನ್ ಟೈಂ ಪಾಸ್ವರ್ಡ್ (ಒಟಿಪಿ) ಪಡೆದು ವಂಚಿಸಿದ್ದ ಆರೋಪದಡಿ ಶಿವಪ್ರಸಾದ್ ಮಾಡಗಿ (30) ಎಂಬಾತನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬೀದರ್ ನಿವಾಸಿಯಾದ ಶಿವಪ್ರಸಾದ್ನ ಕೃತ್ಯದ ವಿರುದ್ಧ ವಕೀಲರೊಬ್ಬರು ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತ ಹಲವರಿಗೆ ವಂಚನೆ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಕೀಲರಿಗೆ ಕರೆ ಮಾಡಿದ್ದ ಆರೋಪಿ, ತಾನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದ. ಕ್ರೆಡಿಟ್ ಕಾರ್ಡ್ ಅವಧಿ ಮುಕ್ತಾಯವಾಗಿದ್ದು, ಅದನ್ನು ನವೀಕರಣ ಮಾಡಬೇಕೆಂದು ತಿಳಿಸಿದ್ದ. ಅದೇ ನೆಪದಲ್ಲಿ ಕಾರ್ಡ್ ಮಾಹಿತಿ ಸಹ ಪಡೆದುಕೊಂಡಿದ್ದ.’</p>.<p>‘ಮಾಹಿತಿ ಬಳಸಿಕೊಂಡು ಹಣ ವರ್ಗಾವಣೆ ಮಾಡಿಕೊಳ್ಳಲು ಮುಂದಾಗಿದ್ದ ಆರೋಪಿ, ಪುನಃ ವಕೀಲರಿಂದ ಐದು ಬಾರಿ ಒಟಿಪಿ ಪಡೆದುಕೊಂಡಿದ್ದ. ನಂತರ, ಅವರ ಖಾತೆಯಲ್ಲಿದ್ದ ₹97,998 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>