‘ಜ.13ರಂದು ನಡೆಯುವ ಆದಿವಾಸಿ ಸಂಸ್ಕೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ವಿದ್ಯಾನಿಧಿ ಪ್ರಕಾಶನದ ಜಯದೇವ ಮೆಣಸಗಿ ಅವರಿಗೆ ‘ಹಾಲುಮತ ಭಾಸ್ಕರ ಪ್ರಶಸ್ತಿ’, ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಎಂ.ಮೇತ್ರಿ ಅವರಿಗೆ ‘ಕನಕರತ್ನ ಪ್ರಶಸ್ತಿ’, ಕೊಡಗಿನ ಆದಿವಾಸಿ ಹೋರಾಟಗಾರ್ತಿ ಮುತ್ತಮ್ಮ ಅವರಿಗೆ ‘ಸಿದ್ಧಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ ಹಾಗೂ ಸಚಿವ ಬಿ. ಶ್ರೀರಾಮುಲು ಭಾಗವಹಿಸಲಿದ್ದಾರೆ. 14ರಂದು ಜಗದ್ಗುರು ರೇವಣಸಿದ್ದೇಶ್ವರ ಸಿದ್ದರಾಮೇಶ್ವರ ಸ್ಮರಣೋತ್ಸವ ನಡೆಯಲಿದೆ’ ಎಂದು ಮಾಹಿತಿ ನೀಡಿದರು.