ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಸಂಶೋಧಕಿ ವಸುಂಧರಾ ದೇಸಾಯಿ,‘ಹಂಪಿ ಒಂದು ಧಾರ್ಮಿಕ ಕೇಂದ್ರವಾಗಿದ್ದು, ಪ್ರವಾಸಿ ತಾಣವಲ್ಲ. ಈ ಬಗ್ಗೆ ಹಂಪಿಯಲ್ಲಿ ಸತತ 12 ವರ್ಷ ಸಂಶೋಧನೆ ಕೈಗೊಳ್ಳಲಾಗಿದೆ. ಅಲ್ಲಿದ್ದ ಪುರಾತನ ವಿಗ್ರಹಗಳನ್ನು ಸಂರಕ್ಷಣೆ ಮಾಡಲಾಗಿದೆ. ಅವುಗಳನ್ನು ಮತ್ತೆ ಅದೇ ಜಾಗದಲ್ಲಿ ಪ್ರತಿಷ್ಠಾಪಿಸಿ ಪೂಜೆ ಪುನಸ್ಕಾರಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.