<p>ಕೆ.ಆರ್.ಪುರ: ‘ಅಂಗವಿಕಲರು ಸ್ವತಂತ್ರ ಬದುಕು ಕಟ್ಟಿಕೊಳ್ಳುವಂತಾಗಬೇಕು. ಇದಕ್ಕಾಗಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಉದ್ಯೋಗ ಸೃಷ್ಟಿಸಲು ಕ್ರಮಕೈಗೊಳ್ಳಲಾಗುತ್ತದೆ’ ಎಂದು ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಪನಿರ್ದೇಶಕ ಸಿದ್ದರಾಮ ತಿಳಿಸಿದರು.</p>.<p>ಡಿಸೆಬಿಲಿಟೀಸ್ ರಿಹ್ಯಾಬಿಲಿಟೇಷನ್ ಟ್ರಸ್ಟ್, ಕೌಶಲಾಭಿವೃದ್ಧಿ ಕೇಂದ್ರ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ‘ರಾಷ್ಟ್ರಮಟ್ಟದ ಕಲಾ ಪ್ರತಿಭೋತ್ಸವ–2021’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಗವಿಕಲರ ಕುರಿತ ದೃಷ್ಟಿಕೋನ ಬದಲಾಗಬೇಕು. ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು. ಅವರಲ್ಲಿರುವ ವಿಶೇಷ ಕಲೆಯನ್ನು ಗುರುತಿಸಿ ಪೋಷಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದರು.</p>.<p>ಡಿಸೆಬಿಲಿಟೀಸ್ ರಿಹ್ಯಾಬಿಲಿಟೇಷನ್ ಟ್ರಸ್ಟ್ ಉಪಾಧ್ಯಕ್ಷೆ ಕವಿತಾ ಪಾಂಚಾಳ, ‘ಅಂಗವಿಕಲರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಾಗಬೇಕು. ಕಲಾ ಪ್ರತಿಭೋತ್ಸವ ಇದಕ್ಕೆ ನೆರವಾಗಲಿದೆ’ ಎಂದು ಹೇಳಿದರು.</p>.<p>ಬಿಜೆಪಿಯ ಬೆಂಗಳೂರು ನಗರ ಘಟಕದ ಉಪಾಧ್ಯಕ್ಷ ಎಸ್.ಕೃಷ್ಣಪ್ಪ, ಎಸ್.ಪಿ.ನಾಗರಾಜ್, ಪತ್ರಕರ್ತ ಗಂಡಸಿ ಸದಾನಂದಸ್ವಾಮಿ, ಮುಖಂಡರಾದ ಎಸ್.ಸೇವಕ ವೆಂಕಟರಮಣಪ್ಪ, ಗ್ರಾ.ಪಂ.ಮಾಜಿ ಸದಸ್ಯ ಅಮ್ಜದ್ ಬೇಗ್, ಕಲಾವಿದ ಕಾಂತರಾಜ್, ಕೆ.ವಿ.ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ‘ಅಂಗವಿಕಲರು ಸ್ವತಂತ್ರ ಬದುಕು ಕಟ್ಟಿಕೊಳ್ಳುವಂತಾಗಬೇಕು. ಇದಕ್ಕಾಗಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಉದ್ಯೋಗ ಸೃಷ್ಟಿಸಲು ಕ್ರಮಕೈಗೊಳ್ಳಲಾಗುತ್ತದೆ’ ಎಂದು ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಪನಿರ್ದೇಶಕ ಸಿದ್ದರಾಮ ತಿಳಿಸಿದರು.</p>.<p>ಡಿಸೆಬಿಲಿಟೀಸ್ ರಿಹ್ಯಾಬಿಲಿಟೇಷನ್ ಟ್ರಸ್ಟ್, ಕೌಶಲಾಭಿವೃದ್ಧಿ ಕೇಂದ್ರ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ‘ರಾಷ್ಟ್ರಮಟ್ಟದ ಕಲಾ ಪ್ರತಿಭೋತ್ಸವ–2021’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಗವಿಕಲರ ಕುರಿತ ದೃಷ್ಟಿಕೋನ ಬದಲಾಗಬೇಕು. ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು. ಅವರಲ್ಲಿರುವ ವಿಶೇಷ ಕಲೆಯನ್ನು ಗುರುತಿಸಿ ಪೋಷಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದರು.</p>.<p>ಡಿಸೆಬಿಲಿಟೀಸ್ ರಿಹ್ಯಾಬಿಲಿಟೇಷನ್ ಟ್ರಸ್ಟ್ ಉಪಾಧ್ಯಕ್ಷೆ ಕವಿತಾ ಪಾಂಚಾಳ, ‘ಅಂಗವಿಕಲರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಾಗಬೇಕು. ಕಲಾ ಪ್ರತಿಭೋತ್ಸವ ಇದಕ್ಕೆ ನೆರವಾಗಲಿದೆ’ ಎಂದು ಹೇಳಿದರು.</p>.<p>ಬಿಜೆಪಿಯ ಬೆಂಗಳೂರು ನಗರ ಘಟಕದ ಉಪಾಧ್ಯಕ್ಷ ಎಸ್.ಕೃಷ್ಣಪ್ಪ, ಎಸ್.ಪಿ.ನಾಗರಾಜ್, ಪತ್ರಕರ್ತ ಗಂಡಸಿ ಸದಾನಂದಸ್ವಾಮಿ, ಮುಖಂಡರಾದ ಎಸ್.ಸೇವಕ ವೆಂಕಟರಮಣಪ್ಪ, ಗ್ರಾ.ಪಂ.ಮಾಜಿ ಸದಸ್ಯ ಅಮ್ಜದ್ ಬೇಗ್, ಕಲಾವಿದ ಕಾಂತರಾಜ್, ಕೆ.ವಿ.ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>