ಅಂಗವಿಕಲರ ದಿನಾಚರಣೆ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಳಿಗೆಯನ್ನು ತೆರೆದಿದ್ದ ಸಮಿತಿ, ಅದರ ಮೂರೂ ಪಾರ್ಶ್ವಗಳಲ್ಲೂ ದಪ್ಪ ಅಕ್ಷರಗಳಲ್ಲಿ ಅಂಗವಿಕಲರ ಬೇಡಿಕೆ ಮತ್ತು ಸಲಹೆಗಳನ್ನು ಮುದ್ರಿಸಿ ಪ್ರಕಟಿಸಿತ್ತು. ಕಾರ್ಯಕ್ರಮಕ್ಕೆ ಬಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸಮಿತಿಯವರು ತಮ್ಮ ಬೇಡಿಕೆಗಳನ್ನು ಮನವರಿಕೆ ಮಾಡಿದರು.