ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚರಕ, ದೇಸಿ, ಅಖಿಲ ಭಾರತ ಕೈಮಗ್ಗ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮ ಸೇವಾ ಸಂಘ ಒಟ್ಟಾಗಿ ಇದೇ 6ರಿಂದ 10ರವರೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ‘ಪವಿತ್ರವಸ್ತ್ರ ಅಭಿಯಾನ’ವನ್ನು ಆಯೋಜಿಸಿವೆ. ಈ ಅಭಿಯಾನವನ್ನು ಕೇಂದ್ರ ಸಚಿವೆಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ.ಕರಕುಶಲ ಹಾಗೂ ಕೈಮಗ್ಗದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಬೆಳಿಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ನಡೆಯುತ್ತದೆ’ ಎಂದು ಹೇಳಿದರು.