’ಠಾಣೆ ವ್ಯಾಪ್ತಿಯಲ್ಲಿರುವ ಜವಾರಿಲಾಲ್ ಎಂಬುವರ ಮನೆಗೆ ಜ 29ರ ರಾತ್ರಿ ನುಗ್ಗಿದ್ದ ಆರೋಪಿಗಳು, ಮನೆಯ ಕೆಲಸಗಾರ ಸತ್ಯನಾರಾಯಣ ಎಂಬಾತನ ಕೈಕಾಲು ಕಟ್ಟಿ ಹಾಕಿ ಸುಲಿಗೆ ಮಾಡಿದ್ದರು. ತನಿಖೆ ಕೈಗೊಂಡಾಗ ವಿಜಯ್ರಾಜ್ ಸಿಕ್ಕಿಬಿದ್ದ. ಉತ್ತಮ್ ಸಿಂಗ್ (50), ಅಮರ್ ಸಿಂಗ್ (25), ಕರಣ್ಸಿಂಗ್ (19) ಹಾಗೂ ಅಮ್ಜದ್ (39) ಎಂಬುವರ ಗ್ಯಾಂಗ್ ಕಟ್ಟಿಕೊಂಡು ಆತ ಕೃತ್ಯ ಎಸಗಿದ್ದ. ಆರೋಪಿಗಳಿಂದ ₹75 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 25 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.