<p><strong>ಬೆಂಗಳೂರು</strong>: ‘ಕೋವಿಡ್ ಪರಿಹಾರ ಪ್ಯಾಕೇಜ್ ಅಡಿ ಸರ್ಕಾರವು ಹಲವು ವರ್ಗಗಳಿಗೆ ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ತಂತ್ರಜ್ಞಾನದ ಬಳಕೆ ಗೊತ್ತಿರದವರಿಗೆ ಈ ಪರಿಹಾರ ಪಡೆಯುವುದು ಕಷ್ಟವಾಗುತ್ತಿದೆ. ತಾಂತ್ರಿಕ ಅಂಶಗಳನ್ನು ಮತ್ತು ನಿಯಮಗಳನ್ನು ಸರಳೀಕರಣಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಒತ್ತಾಯಿಸಿದ್ದಾರೆ.</p>.<p>‘ಹಲವು ವರ್ಗಗಳಿಗೆ ನೀಡಿರುವ ಪರಿಹಾರ ಮೊತ್ತವು ಅತ್ಯಲ್ಪವಾಗಿದೆ. ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು’ ಎಂದು ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>’ಸರ್ಕಾರ ಈಗಾಗಲೇ ಘೋಷಿಸಿರುವ ಸಮುದಾಯಗಳನ್ನು ಹೊರತು ಪಡಿಸಿ, ಅಲೆಮಾರಿಗಳು, ಭಿಕ್ಷುಕರು, ವೇಶ್ಯಾವೃತ್ತಿಯಲ್ಲಿರುವವರು, ಹಕ್ಕಿಪಿಕ್ಕಿ, ಬಹುರೂಪಿ, ಕೊರಚ, ಘಂಟಿಚೋರ್ ಮುಂತಾದವರಿಗೆ ಪರಿಹಾರದ ಅಗತ್ಯವಿದೆ. ಸರ್ಕಾರ ಇವರಿಗೂ ಪರಿಹಾರ ಘೋಷಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋವಿಡ್ ಪರಿಹಾರ ಪ್ಯಾಕೇಜ್ ಅಡಿ ಸರ್ಕಾರವು ಹಲವು ವರ್ಗಗಳಿಗೆ ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ತಂತ್ರಜ್ಞಾನದ ಬಳಕೆ ಗೊತ್ತಿರದವರಿಗೆ ಈ ಪರಿಹಾರ ಪಡೆಯುವುದು ಕಷ್ಟವಾಗುತ್ತಿದೆ. ತಾಂತ್ರಿಕ ಅಂಶಗಳನ್ನು ಮತ್ತು ನಿಯಮಗಳನ್ನು ಸರಳೀಕರಣಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಒತ್ತಾಯಿಸಿದ್ದಾರೆ.</p>.<p>‘ಹಲವು ವರ್ಗಗಳಿಗೆ ನೀಡಿರುವ ಪರಿಹಾರ ಮೊತ್ತವು ಅತ್ಯಲ್ಪವಾಗಿದೆ. ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು’ ಎಂದು ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>’ಸರ್ಕಾರ ಈಗಾಗಲೇ ಘೋಷಿಸಿರುವ ಸಮುದಾಯಗಳನ್ನು ಹೊರತು ಪಡಿಸಿ, ಅಲೆಮಾರಿಗಳು, ಭಿಕ್ಷುಕರು, ವೇಶ್ಯಾವೃತ್ತಿಯಲ್ಲಿರುವವರು, ಹಕ್ಕಿಪಿಕ್ಕಿ, ಬಹುರೂಪಿ, ಕೊರಚ, ಘಂಟಿಚೋರ್ ಮುಂತಾದವರಿಗೆ ಪರಿಹಾರದ ಅಗತ್ಯವಿದೆ. ಸರ್ಕಾರ ಇವರಿಗೂ ಪರಿಹಾರ ಘೋಷಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>